ಬೆಂಗಳೂರು: ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ವಿದಾಯದ ಬ್ರೇಕ್ಫಾಸ್ಟ್ನಲ್ಲಿ ನುಡಿದಿದ್ದಾರೆ.
ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಹೇಳುವುವುದನ್ನು ಪಾಲನೆ ಮಾಡುವುದು ನನ್ನ ಕರ್ತವ್ಯ ಎಂದು ನುಡಿದಿದ್ದಾರೆ. ಈ ಹಿಂದೆ ನಡೆದ ಒಪ್ಪಂದ ಸೂತ್ರ ಬಿಚ್ಚಿಟ್ಟ ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳ ಮುಂದೆ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದರು.
ಮುಂದಿನ ಸಿಎಂ ಯಾರು ಎಂಬ ಹೆಸರನ್ನ ಹೇಳದ ಸಿದ್ದರಾಮಯ್ಯ, ಮುಂದೆ ಯಾರು ಆಗುತ್ತಾರ ಎನ್ನುವುದನ್ನು ಹೈಕಮಾಂಡ್ ಹೇಳಲಿದೆ. ಹೈಕಮಾಂಡ್ ನಾಯಕರು ನಾವು ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ. ಅವರೇ ಎಲ್ಲ ಮುಂದಿನ ಪ್ರಕ್ರಿಯೆ ನಡೆಸುತ್ತಾರೆ ಎಂದು ಹೇಳಿದರು.
ಸಿದ್ದರಾಮಯ್ಯನವರು ಈ ರೀತಿ ಹೇಳುತ್ತಿದ್ದಂತೆ ಡಿಕೆ ಶಿವಕುಮಾರ್ ಕಣ್ಣಂಚಲಿ ನೀರು ಬಂದಿದೆ. ಸಿಎಂ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಕ್ಕೆ ಡಿಕೆಶಿ ಭಾವುಕರಾದರು ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಬೆಳಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಉಪಹಾರ ಸಭೆಗೂ ಮೊದಲು ಡಿಕೆಶಿ ಜೊತೆ ಮೊದಲು ಸಿಎಂ ಪ್ರತ್ಯೇಕ ಮಾತುಕತೆ ನಡೆಸಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…