ನನಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಯಾವುದೇ ಅಸಮಾಧಾನವಿಲ್ಲ : ಶಾಸಕ ರೇಣುಕಾಚಾರ್ಯ -Vishwanews24
ಬೆಂಗಳೂರು:ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ನಾನು ಪಕ್ಷದ ಸಿಪಾಯಿ, ನನಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಯಾವುದೇ ಅಸಮಾಧಾನವಿಲ್ಲ ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸ್ಪಷ್ಟಪಡಿಸಿದ್ದಾರೆ.
ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಶಾಸಕ ರೇಣುಕಾಚಾರ್ಯರಿಗೂ ಅಸಮಾಧಾನವಾಗಿದೆ ಎನ್ನಲಾಗಿತ್ತು.ಮಾಧ್ಯಮಗಳಲ್ಲಿ ಈ ಬಗ್ಗೆ ಸುದ್ದಿ ಹರಿದಾಡಿದ ಬೆನ್ನಲ್ಲೇ ರೇಣುಕಾಚಾರ್ಯ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಪಕ್ಷದ ಶಿಸ್ತಿನ ಸಿಪಾಯಿ ಎಂದು ತಿಳಿಸಿದ್ದಾರೆ.
ತಾವು ಆಂಜನೇಯನ ರೀತಿ ರಾಮನ ಬಂಟನಾಗಿ ಸರ್ಕಾರ ರಕ್ಷಿಸುತ್ತೇನೆ. ಜೀವ ಒತ್ತೆ ಇಟ್ಟು ಸರ್ಕಾರದ ಜೊತೆ ಇರುವುದಾಗಿ ಸ್ಪಷ್ಟಪಡಿಸಿದ್ದಾರೆ. ಇನ್ನು ಕೆಲವರಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನ ಇರಬಹುದು. ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದು ಅಸಮಾಧಾನದಿಂದ ಅಲ್ಲ ಎಂದರು. ಜಾರಕಿಹೊಳಿ ಕುಟುಂಬದವರಿಗೆ ಬೆಳಗಾವಿಯಲ್ಲಿ ಸ್ಥಾನಮಾನವಿದೆ. ಆದರೆ, ಸಚಿವ ಸ್ಥಾನ ಸಿಗದಿದ್ದಕ್ಕೆ ಅವರಿಗೆ ಬೇಸರವಿಲ್ಲ ಎಂದರು.
