ಬೆಂಗಳೂರು:ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ನಾನು ಪಕ್ಷದ ಸಿಪಾಯಿ, ನನಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಯಾವುದೇ ಅಸಮಾಧಾನವಿಲ್ಲ ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸ್ಪಷ್ಟಪಡಿಸಿದ್ದಾರೆ.
ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಶಾಸಕ ರೇಣುಕಾಚಾರ್ಯರಿಗೂ ಅಸಮಾಧಾನವಾಗಿದೆ ಎನ್ನಲಾಗಿತ್ತು.ಮಾಧ್ಯಮಗಳಲ್ಲಿ ಈ ಬಗ್ಗೆ ಸುದ್ದಿ ಹರಿದಾಡಿದ ಬೆನ್ನಲ್ಲೇ ರೇಣುಕಾಚಾರ್ಯ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಪಕ್ಷದ ಶಿಸ್ತಿನ ಸಿಪಾಯಿ ಎಂದು ತಿಳಿಸಿದ್ದಾರೆ.
ತಾವು ಆಂಜನೇಯನ ರೀತಿ ರಾಮನ ಬಂಟನಾಗಿ ಸರ್ಕಾರ ರಕ್ಷಿಸುತ್ತೇನೆ. ಜೀವ ಒತ್ತೆ ಇಟ್ಟು ಸರ್ಕಾರದ ಜೊತೆ ಇರುವುದಾಗಿ ಸ್ಪಷ್ಟಪಡಿಸಿದ್ದಾರೆ. ಇನ್ನು ಕೆಲವರಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನ ಇರಬಹುದು. ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದು ಅಸಮಾಧಾನದಿಂದ ಅಲ್ಲ ಎಂದರು. ಜಾರಕಿಹೊಳಿ ಕುಟುಂಬದವರಿಗೆ ಬೆಳಗಾವಿಯಲ್ಲಿ ಸ್ಥಾನಮಾನವಿದೆ. ಆದರೆ, ಸಚಿವ ಸ್ಥಾನ ಸಿಗದಿದ್ದಕ್ಕೆ ಅವರಿಗೆ ಬೇಸರವಿಲ್ಲ ಎಂದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…