Featured

ನನಗೆ ಸೂರ್ಯನನ್ನು ಕಂಟ್ರೋಲ್ ಮಾಡುವ ಸಾಮರ್ಥ್ಯ ಇದೆ : ನಿತ್ಯಾನಂದ ಸ್ವಾಮೀಜಿ -Vishwanews24

ಬೆಂಗಳೂರು: ನಾನು ಧ್ವಜಾರೋಹಣ ಮುಗಿಸೋವರೆಗೂ ಕಾಣಿಸಬೇಡ ಎಂದು ಸೂರ್ಯನಿಗೆ ಹೇಳಿದ್ದೆ. ಅದಕ್ಕೆ ಅವನು ಅಂದು ಬಿಡದಿಯಲ್ಲಿ 40 ನಿಮಿಷ ತಡವಾಗಿ ಹುಟ್ಟಿದ ಎಂದು ನಿತ್ಯಾನಂದ ಸ್ವಾಮೀಜಿ  ಅನುಯಾಯಿಗಳ ಮುಂದೆ ತಿಳಿಸಿದ್ದಾನೆ.  ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಿಡದಿಯ ತನ್ನ ಆಶ್ರಮದಲ್ಲಿ ಅನುಯಾಯಿಗಳಿಗೆ ಇತ್ತೀಚೆಗೆ ಪ್ರವಚನ ನೀಡುವಾಗ ಬೆಳಗ್ಗೆ ಧ್ವಜಾರೋಹಣ 6.40 ರಿಂದ 7 ಗಂಟೆಯೊಳಗೆ ಮುಗಿಯಬೇಕು. ಆದರೆ, ಇಂದು ನಾನು ಧ್ವಜಾರೋಹಣಕ್ಕೆ ಬರುವುದು ಸ್ವಲ್ಪ ತಡವಾಯಿತು. ಹಾಗಾಗಿ ನಾನು ದ್ವಜಾರೋಹಣ ಮುಗಿಸುವವರೆಗೂ ಉದಯಿಸದಂತೆ ಸೂರ್ಯನಿಗೆ ತಿಳಿಸಿದ್ದೆ. ಅದರಂತೆ ಇಂದು ಸೂರ್ಯ 40 ನಿಮಿಷ ತಡವಾಗಿ ಉದಯಿಸಿದ್ದಾನೆ.ನನಗೆ ಸೂರ್ಯನನ್ನು ಕಂಟ್ರೋಲ್ ಮಾಡುವ ಸಾಮರ್ಥ್ಯ ನನಗಿದೆ ಎಂದು ಹೇಳಿಕೊಂಡಿದ್ದಾನೆ.
ನನ್ನ ಮಾತಿನ ಮೇಲೆ ನಂಬಿಕೆ ಇಲ್ಲದಿದ್ದರೆ ಗೂಗಲ್​ನಲ್ಲಿ ಇಂದು ಬಿಡದಿಯಲ್ಲಿ ಸೂರ್ಯೋದಯವಾಗಬೇಕಿದ್ದ ಸಮಯ ಮತ್ತು ಸೂರ್ಯೋದಯವಾದ ಸಮಯವನ್ನು ಪರೀಕ್ಷಿಸಿ. ನಾನು ಧ್ವಜಾರೋಹಣ ಮುಗಿಸಿ ಹೊರಬಂದಾಗ ಸೂರ್ಯ ಪೂರ್ವದಲ್ಲಿ ಉದಯಿಸುತ್ತಿದ್ದ. ಮೋಡಗಳಿಂದಾಗಿ ಸೂರ್ಯೋದಯ ತಡವಾಗಲಿಲ್ಲ ಎಂಬುದನ್ನು ನೀವು ಗಮನಿಸಬಹುದು ಎಂದು ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾನೆ. ವಿ
Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago