ರಾಜ್ಯ ನ್ಯೂಸ್

ನನಗೆ ಸ್ಥಾನ ಕೊಡದಿರುವುದು ಕಾಂಗ್ರೆಸ್ಸಿಗೆ ಅತೀ ದೊಡ್ಡ ನಷ್ಟವಾಗಲಿದೆ: ಬಿ.ಸಿ. ಪಾಟೀಲ್ ಅಸಮಾಧಾನ

ಬೆಂಗಳೂರು: ಸಚಿವ ಸಂಪುಟ ರಚನೆ ಕಸರತ್ತಿನಲ್ಲಿ ಕೊನೆಗೂ ಕಾಂಗ್ರೆಸ್ ತಮ್ಮ ಸಚಿವರ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಶಾಸಕ ಬಿಸಿ ಪಾಟೀಲ್ ಅವರ ಹೆಸರನ್ನು ಕೈಬಿಡಲಾಗಿದೆ. ಇದರಿಂದ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ  ಮಾತನಾಡಿದ ಅವರು, ಹಾವೇರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮೂರನೇ ಬಾರಿ ಗೆದ್ದಿದ್ದೇನೆ. ನಾನು ಏಕೈಕ ಶಾಸಕನಾಗಿದ್ದರೂ, ನನಗೆ ಸಚಿವ ಸ್ಥಾನ ಕೊಡಲಿಲ್ಲ. ಇದರಿಂದ ನಮ್ಮ ಜಿಲ್ಲೆಯವರಿಗೆ ಬೇಸರವಾಗಿದೆ. ಇನ್ನು ಮುಂದೆ ಅವರು ಹೇಗೆ ಕಾಂಗ್ರೆಸ್ ಗೆ ಬೆಂಬಲಿಸುತ್ತಾರೆ. ಯಾವ ರೀತಿ ಪಟ್ಟಿ ಆಯ್ಕೆ ಮಾಡಿದ್ದಾರೆ ನನಗೆ ತಿಳಿದಿಲ್ಲ ಎಂದು ಆಕ್ರೋಶದಿಂದ ಹೇಳಿದ್ದಾರೆ.

ಬಿಜೆಪಿಯವರು ಸಚಿವ ಸ್ಥಾನ, ಆಸೆ ಆಮಿಷ ಒಡ್ಡಿದ್ರೂ, ನಾನು ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದೇನೆ. ಬಹುಶಃ ನಾನು ನಿಷ್ಠೆಯಿಂದ ಮಾಡಿದ ಕೆಲಸಕ್ಕೆ ಸಿಕ್ಕ ಪ್ರತಿಫಲ ಇದಾಗಿದೆ. ಹಣಕ್ಕಾಗಿ, ಅಧಿಕಾರಕ್ಕಾಗಿ ಆಸೆ ಪಡುವ ವ್ಯಕ್ತಿಯಲ್ಲ ನಾನು. ಅಂತಹ ಭಾವನೆ ನನಗೆ ಇಲ್ಲ, ಆದರೆ ನನಗೆ ನ್ಯಾಯವಾಗಿ ಸಿಗಬೇಕಾದ ಸ್ಥಾನ ಸಿಕ್ಕಿಲ್ಲ. ಇದರಿಂದ ನನಗೆ ನೋವಾಗಿದೆ. ನನ್ನ ಬೆಂಬಲಿಗರಿಗೂ ನೋವಾಗಿದೆ ಎಂದು ಬೇಸರದಿಂದ ಹೇಳಿದರು.

ಸಚಿವರ ಪಟ್ಟಿಯಿಂದ ವೈಯಕ್ತಿಯವಾಗಿ ನನಗೆ ನಷ್ಟವಾಗಿಲ್ಲ. ಕಾಂಗ್ರೆಸ್ ಪಕ್ಷ ದೊಡ್ಡ ನಷ್ಟ ಅನುಭವಿಸುತ್ತದೆ. ನಾನು ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿಲ್ಲ. ಕಾಂಗ್ರೆಸ್ ನ ಆಡಳಿತ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದೇನೆ ಎಂದು ಹೇಳಿದರು.

ನನಗೆ ಯಾವುದೇ ಗಾಡ್ ಫಾದರ್ ಇಲ್ಲ. ಹಣ ಕೂಡ ಇಲ್ಲ ಅದಕ್ಕಾಗಿ ಎರಡನೇ ಪಟ್ಟಿಯಲ್ಲಿ ನನ್ನ ಹೆಸರು ಬರಲ್ಲ. ಬಂದರೆ ನೋಡೋಣ. ಬರಲಿಲ್ಲ ಅಂದರೆ ಜನರು ಶಾಸಕರಾಗಿ ಗೆಲ್ಲಿಸಿದ್ದಾರೆ. ಅವರ ಕೆಲಸ ಮಾಡುತ್ತೇನೆ. ನಾನು ಬಹಳಷ್ಟು ಪ್ರಯಾಣಿಕವಾಗಿ ಇದ್ದೆ. ಈಗ ಅದೇ ತ್ಪಪ್ಪಾಯಿತು ಅಂತ ವಿಷಾದ ವ್ಯಕ್ತಪಡಿಸಿದ್ರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

22 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

22 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

23 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

24 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago