ರಾಜ್ಯ ನ್ಯೂಸ್

ನನಗೆ ಸ್ಥಾನ ಕೊಡದಿರುವುದು ಕಾಂಗ್ರೆಸ್ಸಿಗೆ ಅತೀ ದೊಡ್ಡ ನಷ್ಟವಾಗಲಿದೆ: ಬಿ.ಸಿ. ಪಾಟೀಲ್ ಅಸಮಾಧಾನ

ಬೆಂಗಳೂರು: ಸಚಿವ ಸಂಪುಟ ರಚನೆ ಕಸರತ್ತಿನಲ್ಲಿ ಕೊನೆಗೂ ಕಾಂಗ್ರೆಸ್ ತಮ್ಮ ಸಚಿವರ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಶಾಸಕ ಬಿಸಿ ಪಾಟೀಲ್ ಅವರ ಹೆಸರನ್ನು ಕೈಬಿಡಲಾಗಿದೆ. ಇದರಿಂದ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ  ಮಾತನಾಡಿದ ಅವರು, ಹಾವೇರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮೂರನೇ ಬಾರಿ ಗೆದ್ದಿದ್ದೇನೆ. ನಾನು ಏಕೈಕ ಶಾಸಕನಾಗಿದ್ದರೂ, ನನಗೆ ಸಚಿವ ಸ್ಥಾನ ಕೊಡಲಿಲ್ಲ. ಇದರಿಂದ ನಮ್ಮ ಜಿಲ್ಲೆಯವರಿಗೆ ಬೇಸರವಾಗಿದೆ. ಇನ್ನು ಮುಂದೆ ಅವರು ಹೇಗೆ ಕಾಂಗ್ರೆಸ್ ಗೆ ಬೆಂಬಲಿಸುತ್ತಾರೆ. ಯಾವ ರೀತಿ ಪಟ್ಟಿ ಆಯ್ಕೆ ಮಾಡಿದ್ದಾರೆ ನನಗೆ ತಿಳಿದಿಲ್ಲ ಎಂದು ಆಕ್ರೋಶದಿಂದ ಹೇಳಿದ್ದಾರೆ.

ಬಿಜೆಪಿಯವರು ಸಚಿವ ಸ್ಥಾನ, ಆಸೆ ಆಮಿಷ ಒಡ್ಡಿದ್ರೂ, ನಾನು ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದೇನೆ. ಬಹುಶಃ ನಾನು ನಿಷ್ಠೆಯಿಂದ ಮಾಡಿದ ಕೆಲಸಕ್ಕೆ ಸಿಕ್ಕ ಪ್ರತಿಫಲ ಇದಾಗಿದೆ. ಹಣಕ್ಕಾಗಿ, ಅಧಿಕಾರಕ್ಕಾಗಿ ಆಸೆ ಪಡುವ ವ್ಯಕ್ತಿಯಲ್ಲ ನಾನು. ಅಂತಹ ಭಾವನೆ ನನಗೆ ಇಲ್ಲ, ಆದರೆ ನನಗೆ ನ್ಯಾಯವಾಗಿ ಸಿಗಬೇಕಾದ ಸ್ಥಾನ ಸಿಕ್ಕಿಲ್ಲ. ಇದರಿಂದ ನನಗೆ ನೋವಾಗಿದೆ. ನನ್ನ ಬೆಂಬಲಿಗರಿಗೂ ನೋವಾಗಿದೆ ಎಂದು ಬೇಸರದಿಂದ ಹೇಳಿದರು.

ಸಚಿವರ ಪಟ್ಟಿಯಿಂದ ವೈಯಕ್ತಿಯವಾಗಿ ನನಗೆ ನಷ್ಟವಾಗಿಲ್ಲ. ಕಾಂಗ್ರೆಸ್ ಪಕ್ಷ ದೊಡ್ಡ ನಷ್ಟ ಅನುಭವಿಸುತ್ತದೆ. ನಾನು ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿಲ್ಲ. ಕಾಂಗ್ರೆಸ್ ನ ಆಡಳಿತ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದೇನೆ ಎಂದು ಹೇಳಿದರು.

ನನಗೆ ಯಾವುದೇ ಗಾಡ್ ಫಾದರ್ ಇಲ್ಲ. ಹಣ ಕೂಡ ಇಲ್ಲ ಅದಕ್ಕಾಗಿ ಎರಡನೇ ಪಟ್ಟಿಯಲ್ಲಿ ನನ್ನ ಹೆಸರು ಬರಲ್ಲ. ಬಂದರೆ ನೋಡೋಣ. ಬರಲಿಲ್ಲ ಅಂದರೆ ಜನರು ಶಾಸಕರಾಗಿ ಗೆಲ್ಲಿಸಿದ್ದಾರೆ. ಅವರ ಕೆಲಸ ಮಾಡುತ್ತೇನೆ. ನಾನು ಬಹಳಷ್ಟು ಪ್ರಯಾಣಿಕವಾಗಿ ಇದ್ದೆ. ಈಗ ಅದೇ ತ್ಪಪ್ಪಾಯಿತು ಅಂತ ವಿಷಾದ ವ್ಯಕ್ತಪಡಿಸಿದ್ರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago