Featured

ನನಗೆ ಹಿನ್ನೆಡೆಯಾಗುತ್ತೆ ಅಂತ ಯಾವತ್ತೂ ರಾಜಕಾರಣ ಮಾಡಿದವನಲ್ಲ : ಬಿ. ಶ್ರೀರಾಮುಲು -Vishwanews24

ನನಗೆ ಹಿನ್ನೆಡೆಯಾಗುತ್ತೆ ಅಂತ ಯಾವತ್ತೂ ರಾಜಕಾರಣ ಮಾಡಿದವನಲ್ಲ : ಬಿ. ಶ್ರೀರಾಮುಲು -Vishwanews24

ಮೈಸೂರು: ಅಧಿಕಾರಕ್ಕೊಸ್ಕರ ರಾಜಕಾರಣ ಮಾಡುವವನು ನಾನಲ್ಲ. ನನಗೆ ಹಿನ್ನೆಡೆಯಾಗುತ್ತೆ ಅಂತ ಯಾವತ್ತೂ ರಾಜಕಾರಣ ಮಾಡಿದವನಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯವಾಗಿ ನಾನು ಯಾರನ್ನೂ ಭೇಟಿ ಮಾಡಲ್ಲ. ನಾನು ಜವಾಬ್ದಾರಿಯುತ ಸ್ಥಾನದಲ್ಲಿರೋನು. ನಾನು ತುಂಗಭದ್ರಾ ವ್ಯಾಪ್ತಿಯ ನವಿಲಿ ಏತ ನೀರಾವರಿ ಯೋಜನೆಗೆ ಸಂಬಂಧಿಸಿ ಭೇಟಿ ಕೊಟ್ಟಿದ್ದೆ ಅಷ್ಟೇ ಇದರ ಹೊರತಾಗಿ ನನಗೆ ಹಿನ್ನೆಡೆಯಾಗುತ್ತೆ ಅಂತ ಯಾವತ್ತೂ ರಾಜಕಾರಣ ಮಾಡಿದವನಲ್ಲ. ನಾನು ಅಧಿಕಾರಕ್ಕೊಸ್ಕರ ರಾಜಕಾರಣ ಮಾಡುವವನಲ್ಲ ಎಂದು ರಮೇಶ್‌ ಜಾರಕಿಹೊಳಿ ಆಗಮನದಿಂದ ರಾಮುಲುಗೆ ಹಿನ್ನಡೆ ಆಗುತ್ತೆ ಎಂಬ ಚರ್ಚೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೇ ನೀಡಿದರು.

ಈ ಕುರಿತು ಮಾತನಾಡಿದ ಅವರು ಇಂದಿಗೂ ನನ್ನ ಜೊತೆ ಹಲವಾರು ಶಾಸಕರು, ಸಮುದಾಯ ಇದೆ‌. ಚಾಮರಾಜನಗರದಿಂದ ಬೀದರ್‌ವರೆಗೆ ಜನ ಅದೇ ಪ್ರೀತಿ ವಿಶ್ವಾಸ ತೋರುತ್ತಿದ್ದಾರೆ. ಇದು ನನ್ನನ್ನ ಕೈ ಹಿಡಿಯುತ್ತೇ ಅನ್ನೋ ವಿಶ್ವಾಸವಿದೆ ಎಂದರು. ವಿಜಯನಗರ ಪ್ರತ್ಯೇಕ ಜಿಲ್ಲೆ ವಿವಾದದ ಕುರಿತು ಮಾತನಾಡಿದ ಅವರು, ವಿಜಯನಗರ ಪ್ರತ್ಯೇಕ ಜಿಲ್ಲೆ ಕಡ್ಡಾಯವಾಗಿ ಆಗಬೇಕು. ಬಳ್ಳಾರಿ 250 ಕಿ.ಮಿ. ವ್ಯಾಪ್ತಿಯ ಅತಿ ದೊಡ್ಡ ಜಿಲ್ಲೆ. ಬಹಳ ದಿನಗಳಿಂದ ಪ್ರತ್ಯೇಕ ಜಿಲ್ಲೆ ಆಗಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು ಎಂದು ಹೇಳಿದರು.

ಬಿಜೆಪಿಯಲ್ಲಿ ಮೂಲ ವಲಸಿಗ ಜಟಾಪಟಿ ವಿಚಾರದ ಬಗ್ಗೆ ಮಾತನಾಡಿದ ಅವರು, ನಾನು ಬಿಜೆಪಿಯೇ ಒಂದು ಎಂದು ತಿಳಿಕೊಂಡಿದ್ದೇನೆ. ಸರ್ಕಾರ ಬಂದ ಮೇಲೆ ಹಲವಾರು ಮಂದಿ ಬಿಜೆಪಿಯಲ್ಲಿ ನಿಂತು ಗೆದ್ದಿದ್ದಾರೆ. ಆದರೆ ಐದಾರು ಬಾರಿ ಗೆದ್ದಿರುವವರಿಗೆ ಅವಕಾಶ ಸಿಗಬೇಕು. ಐದಾರು ಬಾರಿ ಗೆದ್ದಿರುವ ಯಾವ ಆಕಾಂಕ್ಷಿಗಳಿದ್ದಾರೋ ಅವರಿಗೆ ಆದ್ಯತೆ ನೀಡುವಂತೆ ಸಿಎಂ ಬಳಿ ಮನವಿ ಮಾಡಿದ್ದೇವೆ. ಹೀಗಾಗಿ ಮುಖ್ಯಮಂತ್ರಿಗಳು ಸೂಕ್ತ ಕಾಲದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago