ಮೈಸೂರು: ಅಧಿಕಾರಕ್ಕೊಸ್ಕರ ರಾಜಕಾರಣ ಮಾಡುವವನು ನಾನಲ್ಲ. ನನಗೆ ಹಿನ್ನೆಡೆಯಾಗುತ್ತೆ ಅಂತ ಯಾವತ್ತೂ ರಾಜಕಾರಣ ಮಾಡಿದವನಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯವಾಗಿ ನಾನು ಯಾರನ್ನೂ ಭೇಟಿ ಮಾಡಲ್ಲ. ನಾನು ಜವಾಬ್ದಾರಿಯುತ ಸ್ಥಾನದಲ್ಲಿರೋನು. ನಾನು ತುಂಗಭದ್ರಾ ವ್ಯಾಪ್ತಿಯ ನವಿಲಿ ಏತ ನೀರಾವರಿ ಯೋಜನೆಗೆ ಸಂಬಂಧಿಸಿ ಭೇಟಿ ಕೊಟ್ಟಿದ್ದೆ ಅಷ್ಟೇ ಇದರ ಹೊರತಾಗಿ ನನಗೆ ಹಿನ್ನೆಡೆಯಾಗುತ್ತೆ ಅಂತ ಯಾವತ್ತೂ ರಾಜಕಾರಣ ಮಾಡಿದವನಲ್ಲ. ನಾನು ಅಧಿಕಾರಕ್ಕೊಸ್ಕರ ರಾಜಕಾರಣ ಮಾಡುವವನಲ್ಲ ಎಂದು ರಮೇಶ್ ಜಾರಕಿಹೊಳಿ ಆಗಮನದಿಂದ ರಾಮುಲುಗೆ ಹಿನ್ನಡೆ ಆಗುತ್ತೆ ಎಂಬ ಚರ್ಚೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೇ ನೀಡಿದರು.
ಈ ಕುರಿತು ಮಾತನಾಡಿದ ಅವರು ಇಂದಿಗೂ ನನ್ನ ಜೊತೆ ಹಲವಾರು ಶಾಸಕರು, ಸಮುದಾಯ ಇದೆ. ಚಾಮರಾಜನಗರದಿಂದ ಬೀದರ್ವರೆಗೆ ಜನ ಅದೇ ಪ್ರೀತಿ ವಿಶ್ವಾಸ ತೋರುತ್ತಿದ್ದಾರೆ. ಇದು ನನ್ನನ್ನ ಕೈ ಹಿಡಿಯುತ್ತೇ ಅನ್ನೋ ವಿಶ್ವಾಸವಿದೆ ಎಂದರು. ವಿಜಯನಗರ ಪ್ರತ್ಯೇಕ ಜಿಲ್ಲೆ ವಿವಾದದ ಕುರಿತು ಮಾತನಾಡಿದ ಅವರು, ವಿಜಯನಗರ ಪ್ರತ್ಯೇಕ ಜಿಲ್ಲೆ ಕಡ್ಡಾಯವಾಗಿ ಆಗಬೇಕು. ಬಳ್ಳಾರಿ 250 ಕಿ.ಮಿ. ವ್ಯಾಪ್ತಿಯ ಅತಿ ದೊಡ್ಡ ಜಿಲ್ಲೆ. ಬಹಳ ದಿನಗಳಿಂದ ಪ್ರತ್ಯೇಕ ಜಿಲ್ಲೆ ಆಗಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು ಎಂದು ಹೇಳಿದರು.
ಬಿಜೆಪಿಯಲ್ಲಿ ಮೂಲ ವಲಸಿಗ ಜಟಾಪಟಿ ವಿಚಾರದ ಬಗ್ಗೆ ಮಾತನಾಡಿದ ಅವರು, ನಾನು ಬಿಜೆಪಿಯೇ ಒಂದು ಎಂದು ತಿಳಿಕೊಂಡಿದ್ದೇನೆ. ಸರ್ಕಾರ ಬಂದ ಮೇಲೆ ಹಲವಾರು ಮಂದಿ ಬಿಜೆಪಿಯಲ್ಲಿ ನಿಂತು ಗೆದ್ದಿದ್ದಾರೆ. ಆದರೆ ಐದಾರು ಬಾರಿ ಗೆದ್ದಿರುವವರಿಗೆ ಅವಕಾಶ ಸಿಗಬೇಕು. ಐದಾರು ಬಾರಿ ಗೆದ್ದಿರುವ ಯಾವ ಆಕಾಂಕ್ಷಿಗಳಿದ್ದಾರೋ ಅವರಿಗೆ ಆದ್ಯತೆ ನೀಡುವಂತೆ ಸಿಎಂ ಬಳಿ ಮನವಿ ಮಾಡಿದ್ದೇವೆ. ಹೀಗಾಗಿ ಮುಖ್ಯಮಂತ್ರಿಗಳು ಸೂಕ್ತ ಕಾಲದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…