ಉಡುಪಿ: ನನಗೊಮ್ಮೆ ಕಾರ್ಕಳದಲ್ಲಿ ಶಾಸಕನಾಗುವ ಅವಕಾಶ ಕೊಟ್ಟು ನೋಡಿ, ಹಿಂದುತ್ವ ಎಂದರೇನೆಂದು ಸಾಬೀತು ಮಾಡಿ ತೋರಿಸುತ್ತೇನೆ ಎಂದು ಪ್ರಮೋದ್ ಮುತಾಲಿಕ್ ಸವಾಲು ಹಾಕಿದ್ದಾರೆ.
ಮಂಗಳವಾರ ಕಾರ್ಕಳದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್ ಅವರು, ನಾನು ಕಾರ್ಕಳದಿಂದ ವಿಧಾನಸಭೆಗೆ ಸ್ಪರ್ಧಿಸುವುದಾಗಿ ಹೇಳಿದಾಗಿನಿಂದ ನನ್ನ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿದೆ. ಹಿಂದುತ್ವಕ್ಕಾಗಿ ನಾನು ಸಾಕಷ್ಟು ಆರೋಪಗಳನ್ನು ಎದುರಿಸಿದ್ದೇನೆ, ಸಂಕಷ್ಟ ಅನುಭವಿಸಿದ್ದೇನೆ. ಮುಖಕ್ಕೆ ಮಸಿ ಬಳಿಸಿಕೊಂಡಿದ್ದೇನೆ, ಅದಕ್ಕೆಲ್ಲ ಚುನಾವಣೆಯಲ್ಲಿ ಉತ್ತರ ನೀಡುತ್ತೇನೆ. ಸಂಘವು ನನಗೆ ರಾಷ್ಟ್ರಪ್ರೇಮ, ಹಿಂದುತ್ವದ ರಕ್ಷಣೆಯ ಪಾಠವನ್ನು ಕಲಿಸಿದೆ ಎಂದು ಹೇಳಿದರು.
ʻಹಿಂದುಗಳ ನೋವಿಗೆ ಧ್ವನಿಯಾಗಲು ಕಾರ್ಕಳಕ್ಕೆ ಬಂದಿದ್ದೇನೆ. ನನಗೆ ಹಣ, ಆಸ್ತಿ ಮಾಡುವ ಉದ್ದೇಶವಿಲ್ಲ, ಆದ್ದರಿಂದ ಬಾರಿ ಗುರುವಿಗಾಗಿ ಕ್ಷೇತ್ರ ತ್ಯಾಗ ಮಾಡಿʼʼ ಎಂದು ಪ್ರಮೋದ್ ಮುತಾಲಿಕ್ ಅವರು ಸಚಿವ ಸುನಿಲ್ ಕುಮಾರ್ಗೆ ಮನವಿ ಮಾಡಿದರು.
ತಮ್ಮ ಟೀಮ್ಗೆ ಟಿಕೆಟ್ ಕೊಟ್ಟರೂ ಕೊಡದಿದ್ದರೂ ಸ್ಪರ್ಧೆಗೆ ಇಳಿಯೋದು ಗ್ಯಾರಂಟಿ ಎಂದು ಹಠ ತೊಟ್ಟಿರುವ ಪ್ರಮೋದ್ ಮುತಾಲಿಕ್ ಅವರು ಇಂಧನ ಸಚಿವ ಹಾಗೂ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸುನಿಲ್ ಕುಮಾರ್ ಅವರ ಮುಂದೆ ಒಂದು ಬೇಡಿಕೆ ಇಟ್ಟಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…