Featured

ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ : ಸಿಎಂ – vishwanews24

ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು

ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ : ಸಿಎಂ

ಕೆ.ಆರ್.ಪೇಟೆ:ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು.ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡವನ್ನು ಉದ್ಘಾಟಿಸಿ ಹಲವು ಫಲಾನುಭವಿಗಳಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿ, GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್. ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ. ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು. ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು ಎಂದರು.

ಕೈಗಾರಿಕೋದ್ಯಮಿಗಳು ಅವರು ತಯಾರಿಸಿದ ವಸ್ತುಗೆ ಅವರೇ ಬೆಲೆ ನಿಗಧಿ ಮಾಡ್ತಾರೆ. ಇದೇ ಅಧಿಕಾರ ನಮ್ಮ‌ ರೈತರಿಗೂ ಸಿಗಬೇಕು.ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಒಕ್ಕೂಟ ವ್ಯವಸ್ಥೆ ಯಶಸ್ವಿ ಆಗಬೇಕಾದರೆ ದೇಶದ 140 ಕೋಟಿ ಜನರಿಗೂ ಸಕಲ ಸಹಕಾರ ಕೊಡಬೇಕು. ನಮ್ಮ ರೈತ ಸಮುದಾಯಕ್ಕೆ ಬೆಲೆ ಫಿಕ್ಸ್ ಮಾಡುವ ಅಧಿಕಾರ ಬರಬೇಕು. ಆಗ ತಾರತಮ್ಯ ನಿವಾರಣೆ ಆಗುತ್ತದೆ ಎಂದರು.

ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು.ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ. ತೆರಿಗೆ ಕಟ್ಟುವವರಿಗೆ ಅನ್ನಭಾಗ್ಯದ ಅಗತ್ಯ ಇಲ್ಲ ಅಲ್ಲವೇ ಎಂದು ಪ್ರಶ್ನಿಸಿದರು.

ಈ ದೇಶಕ್ಕೆ ಸಿಕ್ಕ ರಾಜಕೀಯ ಸ್ವಾತಂತ್ರ್ಯ ಯಶಸ್ವಿ ಆಗಬೇಕಾದರೆ, ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗಬೇಕು ಎನ್ನುವ ಅಂಬೇಡ್ಕರ್ ಅವರ ಮಾತನ್ನು ಉಲ್ಲೇಖಿಸಿ ಈ ಕಾರಣಕ್ಕೇ ನಾವು ಅನ್ನ ಭಾಗ್ಯ ಮತ್ತು ಆರ್ಥಿಕ ಶಕ್ತಿ ಕೊಡುವ ಐದೈದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ ಎಂದರು.

ಬಡ ಕುಟುಂಬದವರ ಮತ್ತು ನಮ್ಮ ಹೆಣ್ಣು ಮಕ್ಕಳ ಹಣ ಉಳಿತಾಯ ಆಗಲಿ ಎನ್ನುವ ಕಾರಣದಿಂದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಯೋಜನೆಗಳನ್ನು ನಮ್ಮ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ ಎಂದರು‌. ಕೈಯಲ್ಲಿ ಕಾಸಿದ್ದರೆ ತಾನೆ ನಮ್ಮ ಜನ ಖರೀದಿಗೆ ಹೋಗೋದು. ಅದಕ್ಕೇ ಜನರ ಕೈಯಲ್ಲಿ ಕಾಸು ಇರುವ ಯೋಜನೆ ಜಾರಿ ಮಾಡಿದ್ದೇವೆ ಎಂದರು.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

16 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

20 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

21 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

21 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

22 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

22 hours ago