Featured

ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ : ಸಿಎಂ – vishwanews24

ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು

ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ : ಸಿಎಂ

ಕೆ.ಆರ್.ಪೇಟೆ:ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು.ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡವನ್ನು ಉದ್ಘಾಟಿಸಿ ಹಲವು ಫಲಾನುಭವಿಗಳಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿ, GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್. ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ. ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು. ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು ಎಂದರು.

ಕೈಗಾರಿಕೋದ್ಯಮಿಗಳು ಅವರು ತಯಾರಿಸಿದ ವಸ್ತುಗೆ ಅವರೇ ಬೆಲೆ ನಿಗಧಿ ಮಾಡ್ತಾರೆ. ಇದೇ ಅಧಿಕಾರ ನಮ್ಮ‌ ರೈತರಿಗೂ ಸಿಗಬೇಕು.ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಒಕ್ಕೂಟ ವ್ಯವಸ್ಥೆ ಯಶಸ್ವಿ ಆಗಬೇಕಾದರೆ ದೇಶದ 140 ಕೋಟಿ ಜನರಿಗೂ ಸಕಲ ಸಹಕಾರ ಕೊಡಬೇಕು. ನಮ್ಮ ರೈತ ಸಮುದಾಯಕ್ಕೆ ಬೆಲೆ ಫಿಕ್ಸ್ ಮಾಡುವ ಅಧಿಕಾರ ಬರಬೇಕು. ಆಗ ತಾರತಮ್ಯ ನಿವಾರಣೆ ಆಗುತ್ತದೆ ಎಂದರು.

ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು.ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ. ತೆರಿಗೆ ಕಟ್ಟುವವರಿಗೆ ಅನ್ನಭಾಗ್ಯದ ಅಗತ್ಯ ಇಲ್ಲ ಅಲ್ಲವೇ ಎಂದು ಪ್ರಶ್ನಿಸಿದರು.

ಈ ದೇಶಕ್ಕೆ ಸಿಕ್ಕ ರಾಜಕೀಯ ಸ್ವಾತಂತ್ರ್ಯ ಯಶಸ್ವಿ ಆಗಬೇಕಾದರೆ, ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗಬೇಕು ಎನ್ನುವ ಅಂಬೇಡ್ಕರ್ ಅವರ ಮಾತನ್ನು ಉಲ್ಲೇಖಿಸಿ ಈ ಕಾರಣಕ್ಕೇ ನಾವು ಅನ್ನ ಭಾಗ್ಯ ಮತ್ತು ಆರ್ಥಿಕ ಶಕ್ತಿ ಕೊಡುವ ಐದೈದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ ಎಂದರು.

ಬಡ ಕುಟುಂಬದವರ ಮತ್ತು ನಮ್ಮ ಹೆಣ್ಣು ಮಕ್ಕಳ ಹಣ ಉಳಿತಾಯ ಆಗಲಿ ಎನ್ನುವ ಕಾರಣದಿಂದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಯೋಜನೆಗಳನ್ನು ನಮ್ಮ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ ಎಂದರು‌. ಕೈಯಲ್ಲಿ ಕಾಸಿದ್ದರೆ ತಾನೆ ನಮ್ಮ ಜನ ಖರೀದಿಗೆ ಹೋಗೋದು. ಅದಕ್ಕೇ ಜನರ ಕೈಯಲ್ಲಿ ಕಾಸು ಇರುವ ಯೋಜನೆ ಜಾರಿ ಮಾಡಿದ್ದೇವೆ ಎಂದರು.

Vishwa News 24

Recent Posts

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

2 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

2 hours ago

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ – vishwanews24

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…

2 hours ago

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ – vishwanews24

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್‌ವರ್ಕ್‌…

3 hours ago

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ – vishwanews24

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…

3 hours ago

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ – vishwanews24

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…

3 hours ago