Featured

ನನ್ನದು ದತ್ತಾತ್ರೇಯ ಗೋತ್ರ, ಹಾಗೂ ನನ್ನ ಕುಟುಂಬ ಕಾಶ್ಮೀರಿ ಬ್ರಾಹ್ಮಣ : ರಾಹುಲ್​ ಗಾಂಧಿ

ಜೈಪುರ: ವಿಧಾನಸಭಾ ಚುನಾವಣೆಯತ್ತ ಮುಖ ಮಾಡಿರುವ ರಾಜಸ್ಥಾನದ ಪ್ರಸಿದ್ಧ ಪುಷ್ಕರ್‌ ನಲ್ಲಿನ ಬ್ರಹ್ಮ ದೇವಸ್ಥಾನಕ್ಕೆ ಇಂದು ಸೋಮವಾರ ಭೇಟಿ ನೀಡಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ತನ್ನದು ದತ್ತಾತ್ರೇಯ ಗೋತ್ರವೆಂದೂ ತಾನು ಕೌಲ ಬ್ರಾಹ್ಮಣ ನೆಂದೂ ಬಹಿರಂಗಪಡಿಸಿದರು.

ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಅವರ ಗೋತ್ರ ಯಾವುದು ಎಂಬ ಬಿಜೆಪಿ ಪ್ರಶ್ನೆಗೆ ಸ್ವತಃ ​ರಾಹುಲ್​ ಗಾಂಧಿ ಅವರೇ ಉತ್ತರಿಸಿದ್ದಾರೆ. ರಾಜಸ್ಥಾನದ ಪುಷ್ಕರ ನಗರದಲ್ಲಿ ಬ್ರಹ್ಮ ದೇವಾಲಯಕ್ಕೆ ರಾಹುಲ್​ ಭೇಟಿ ನೀಡಿದ್ದ ವೇಳೆ ಅಲ್ಲಿನ ಅರ್ಚಕರಿಗೆ ತಮ್ಮ ಕುಲ ಗೋತ್ರಗಳ ಬಗ್ಗೆ ಮಾಹಿತಿ ನೀಡಿದ್ದಾರೆ..

ತನ್ನದು ದತ್ತಾತ್ರೇಯ ಗೋತ್ರ ಎಂದೂ, ತಾನು ಕೌಲ ಬ್ರಾಹ್ಮಣಕ್ಕೆ ಸೇರಿದವನೆಂದೂ ರಾಹುಲ್ ಗಾಂಧಿ​ ಹೇಳಿಕೊಂಡಿದ್ದಾರೆ. ಪೂಜೆಯ ಬಳಿಕ, ಈ ಬಗ್ಗೆ ಮಾತನಾಡಿರುವ ಬ್ರಹ್ಮ ದೇವಾಲಯದ ಅರ್ಚಕರು ರಾಹುಲ್​ ಗಾಂಧಿ ಅವರು ತಮ್ಮದು ದತ್ತಾತ್ರೇಯ ಗೋತ್ರ, ತಮ್ಮ ಕುಟುಂಬ ಕಾಶ್ಮೀರಿ ಬ್ರಾಹ್ಮಣ ಪಂಗಡಕ್ಕೆ ಸೇರಿದ್ದೆಂದು ಹೇಳಿರುವುದಾಗಿ ತಿಳಿಸಿದರು.

ಕೌಲ್ ಎಂಬುದು ಸಂಸ್ಕೃತದ ಕುಲ್​ ಪದವಾಗಿದ್ದು, ಕಾಶ್ಮೀರಿ ಪಂಡಿತರು ಬಳಸುವ ಉಪನಾಮವಾಗಿದೆ. ಮೋತಿಲಾಲ್ ನೆಹರು, ಜವಹಾರಲಾಲ್ ನೆಹರು, ರಾಜೀವ್​ ಗಾಂಧಿ, ರಾಹುಲ್​ ಗಾಂಧಿ ಇವರೆಲ್ಲ ಅಲಹಾಬಾದ್ ನಲ್ಲಿ ನೆಲೆಸಿದ್ದ ಕಾಶ್ಮೀರಿ ಪಂಡಿತರು ಎಂದು ಅರ್ಚಕರು ಹೇಳಿದ್ದಾರೆ.

ತನ್ನದು ದತ್ತಾತ್ರೇಯ ಗೋತ್ರ ಎಂದೂ, ತಮ್ಮ ಕುಟುಂಬ ಕಾಶ್ಮೀರಿ ಬ್ರಾಹ್ಮಣ ಪಂಗಡಕ್ಕೆ ಸೇರಿದ್ದೆಂದು ರಾಹುಲ್ ಗಾಂಧಿ​ ಹೇಳಿದ್ದಾರೆ ಎಂದು ಪೂಜೆಯ ಬಳಿಕ ಬ್ರಹ್ಮ ದೇವಾಲಯದ ಅರ್ಚಕರು ತಿಳಿಸಿದ್ದಾರೆ.

 

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago