Featured

ನನ್ನದು ದತ್ತಾತ್ರೇಯ ಗೋತ್ರ, ಹಾಗೂ ನನ್ನ ಕುಟುಂಬ ಕಾಶ್ಮೀರಿ ಬ್ರಾಹ್ಮಣ : ರಾಹುಲ್​ ಗಾಂಧಿ

ಜೈಪುರ: ವಿಧಾನಸಭಾ ಚುನಾವಣೆಯತ್ತ ಮುಖ ಮಾಡಿರುವ ರಾಜಸ್ಥಾನದ ಪ್ರಸಿದ್ಧ ಪುಷ್ಕರ್‌ ನಲ್ಲಿನ ಬ್ರಹ್ಮ ದೇವಸ್ಥಾನಕ್ಕೆ ಇಂದು ಸೋಮವಾರ ಭೇಟಿ ನೀಡಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ತನ್ನದು ದತ್ತಾತ್ರೇಯ ಗೋತ್ರವೆಂದೂ ತಾನು ಕೌಲ ಬ್ರಾಹ್ಮಣ ನೆಂದೂ ಬಹಿರಂಗಪಡಿಸಿದರು.

ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಅವರ ಗೋತ್ರ ಯಾವುದು ಎಂಬ ಬಿಜೆಪಿ ಪ್ರಶ್ನೆಗೆ ಸ್ವತಃ ​ರಾಹುಲ್​ ಗಾಂಧಿ ಅವರೇ ಉತ್ತರಿಸಿದ್ದಾರೆ. ರಾಜಸ್ಥಾನದ ಪುಷ್ಕರ ನಗರದಲ್ಲಿ ಬ್ರಹ್ಮ ದೇವಾಲಯಕ್ಕೆ ರಾಹುಲ್​ ಭೇಟಿ ನೀಡಿದ್ದ ವೇಳೆ ಅಲ್ಲಿನ ಅರ್ಚಕರಿಗೆ ತಮ್ಮ ಕುಲ ಗೋತ್ರಗಳ ಬಗ್ಗೆ ಮಾಹಿತಿ ನೀಡಿದ್ದಾರೆ..

ತನ್ನದು ದತ್ತಾತ್ರೇಯ ಗೋತ್ರ ಎಂದೂ, ತಾನು ಕೌಲ ಬ್ರಾಹ್ಮಣಕ್ಕೆ ಸೇರಿದವನೆಂದೂ ರಾಹುಲ್ ಗಾಂಧಿ​ ಹೇಳಿಕೊಂಡಿದ್ದಾರೆ. ಪೂಜೆಯ ಬಳಿಕ, ಈ ಬಗ್ಗೆ ಮಾತನಾಡಿರುವ ಬ್ರಹ್ಮ ದೇವಾಲಯದ ಅರ್ಚಕರು ರಾಹುಲ್​ ಗಾಂಧಿ ಅವರು ತಮ್ಮದು ದತ್ತಾತ್ರೇಯ ಗೋತ್ರ, ತಮ್ಮ ಕುಟುಂಬ ಕಾಶ್ಮೀರಿ ಬ್ರಾಹ್ಮಣ ಪಂಗಡಕ್ಕೆ ಸೇರಿದ್ದೆಂದು ಹೇಳಿರುವುದಾಗಿ ತಿಳಿಸಿದರು.

ಕೌಲ್ ಎಂಬುದು ಸಂಸ್ಕೃತದ ಕುಲ್​ ಪದವಾಗಿದ್ದು, ಕಾಶ್ಮೀರಿ ಪಂಡಿತರು ಬಳಸುವ ಉಪನಾಮವಾಗಿದೆ. ಮೋತಿಲಾಲ್ ನೆಹರು, ಜವಹಾರಲಾಲ್ ನೆಹರು, ರಾಜೀವ್​ ಗಾಂಧಿ, ರಾಹುಲ್​ ಗಾಂಧಿ ಇವರೆಲ್ಲ ಅಲಹಾಬಾದ್ ನಲ್ಲಿ ನೆಲೆಸಿದ್ದ ಕಾಶ್ಮೀರಿ ಪಂಡಿತರು ಎಂದು ಅರ್ಚಕರು ಹೇಳಿದ್ದಾರೆ.

ತನ್ನದು ದತ್ತಾತ್ರೇಯ ಗೋತ್ರ ಎಂದೂ, ತಮ್ಮ ಕುಟುಂಬ ಕಾಶ್ಮೀರಿ ಬ್ರಾಹ್ಮಣ ಪಂಗಡಕ್ಕೆ ಸೇರಿದ್ದೆಂದು ರಾಹುಲ್ ಗಾಂಧಿ​ ಹೇಳಿದ್ದಾರೆ ಎಂದು ಪೂಜೆಯ ಬಳಿಕ ಬ್ರಹ್ಮ ದೇವಾಲಯದ ಅರ್ಚಕರು ತಿಳಿಸಿದ್ದಾರೆ.

 

 

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago