Featured

ನನ್ನದು ದತ್ತಾತ್ರೇಯ ಗೋತ್ರ, ಹಾಗೂ ನನ್ನ ಕುಟುಂಬ ಕಾಶ್ಮೀರಿ ಬ್ರಾಹ್ಮಣ : ರಾಹುಲ್​ ಗಾಂಧಿ

ಜೈಪುರ: ವಿಧಾನಸಭಾ ಚುನಾವಣೆಯತ್ತ ಮುಖ ಮಾಡಿರುವ ರಾಜಸ್ಥಾನದ ಪ್ರಸಿದ್ಧ ಪುಷ್ಕರ್‌ ನಲ್ಲಿನ ಬ್ರಹ್ಮ ದೇವಸ್ಥಾನಕ್ಕೆ ಇಂದು ಸೋಮವಾರ ಭೇಟಿ ನೀಡಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ತನ್ನದು ದತ್ತಾತ್ರೇಯ ಗೋತ್ರವೆಂದೂ ತಾನು ಕೌಲ ಬ್ರಾಹ್ಮಣ ನೆಂದೂ ಬಹಿರಂಗಪಡಿಸಿದರು.

ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಅವರ ಗೋತ್ರ ಯಾವುದು ಎಂಬ ಬಿಜೆಪಿ ಪ್ರಶ್ನೆಗೆ ಸ್ವತಃ ​ರಾಹುಲ್​ ಗಾಂಧಿ ಅವರೇ ಉತ್ತರಿಸಿದ್ದಾರೆ. ರಾಜಸ್ಥಾನದ ಪುಷ್ಕರ ನಗರದಲ್ಲಿ ಬ್ರಹ್ಮ ದೇವಾಲಯಕ್ಕೆ ರಾಹುಲ್​ ಭೇಟಿ ನೀಡಿದ್ದ ವೇಳೆ ಅಲ್ಲಿನ ಅರ್ಚಕರಿಗೆ ತಮ್ಮ ಕುಲ ಗೋತ್ರಗಳ ಬಗ್ಗೆ ಮಾಹಿತಿ ನೀಡಿದ್ದಾರೆ..

ತನ್ನದು ದತ್ತಾತ್ರೇಯ ಗೋತ್ರ ಎಂದೂ, ತಾನು ಕೌಲ ಬ್ರಾಹ್ಮಣಕ್ಕೆ ಸೇರಿದವನೆಂದೂ ರಾಹುಲ್ ಗಾಂಧಿ​ ಹೇಳಿಕೊಂಡಿದ್ದಾರೆ. ಪೂಜೆಯ ಬಳಿಕ, ಈ ಬಗ್ಗೆ ಮಾತನಾಡಿರುವ ಬ್ರಹ್ಮ ದೇವಾಲಯದ ಅರ್ಚಕರು ರಾಹುಲ್​ ಗಾಂಧಿ ಅವರು ತಮ್ಮದು ದತ್ತಾತ್ರೇಯ ಗೋತ್ರ, ತಮ್ಮ ಕುಟುಂಬ ಕಾಶ್ಮೀರಿ ಬ್ರಾಹ್ಮಣ ಪಂಗಡಕ್ಕೆ ಸೇರಿದ್ದೆಂದು ಹೇಳಿರುವುದಾಗಿ ತಿಳಿಸಿದರು.

ಕೌಲ್ ಎಂಬುದು ಸಂಸ್ಕೃತದ ಕುಲ್​ ಪದವಾಗಿದ್ದು, ಕಾಶ್ಮೀರಿ ಪಂಡಿತರು ಬಳಸುವ ಉಪನಾಮವಾಗಿದೆ. ಮೋತಿಲಾಲ್ ನೆಹರು, ಜವಹಾರಲಾಲ್ ನೆಹರು, ರಾಜೀವ್​ ಗಾಂಧಿ, ರಾಹುಲ್​ ಗಾಂಧಿ ಇವರೆಲ್ಲ ಅಲಹಾಬಾದ್ ನಲ್ಲಿ ನೆಲೆಸಿದ್ದ ಕಾಶ್ಮೀರಿ ಪಂಡಿತರು ಎಂದು ಅರ್ಚಕರು ಹೇಳಿದ್ದಾರೆ.

ತನ್ನದು ದತ್ತಾತ್ರೇಯ ಗೋತ್ರ ಎಂದೂ, ತಮ್ಮ ಕುಟುಂಬ ಕಾಶ್ಮೀರಿ ಬ್ರಾಹ್ಮಣ ಪಂಗಡಕ್ಕೆ ಸೇರಿದ್ದೆಂದು ರಾಹುಲ್ ಗಾಂಧಿ​ ಹೇಳಿದ್ದಾರೆ ಎಂದು ಪೂಜೆಯ ಬಳಿಕ ಬ್ರಹ್ಮ ದೇವಾಲಯದ ಅರ್ಚಕರು ತಿಳಿಸಿದ್ದಾರೆ.

 

 

 

Vishwa News 24

Recent Posts

ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ ಅಧಿಕೃತವಾಗಿ ಸೇರ್ಪಡೆ – vishwanews24

ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…

28 minutes ago

ಮಂಗಳೂರು: ಜೂ.29ರಂದು ವಿಶೇಷ ಸಹಕಾರ ಸಪ್ತಾಹ ಉದ್ಘಾಟನೆ – vishwanews24

ಮಂಗಳೂರು:  ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…

46 minutes ago

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ – vishwanews24

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…

59 minutes ago

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ – vishwanews24

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…

1 hour ago

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್‌ಆರ್ ನಗರದ …

2 hours ago

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ : ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ – vishwanews24

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ  ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ  ರುತ್ ಪ್ರಭು ತಾವು ಮೊದಲ…

2 hours ago