Featured

ನನ್ನನ್ನು ಕಂಡ್ರೆ ಬಿಜೆಪಿಯವರು ಓಡಿ ಹೋಗ್ತಿದ್ದಾರೆ- ರಾಹುಲ್ ಗಾಂಧಿ

ನವದೆಹಲಿ: ನನ್ನನ್ನು ಕಂಡರೆ ಎಲ್ಲಿ ಅಪ್ಪಿಕೊಳ್ಳುತ್ತಾರೋ ಅಂತಾ ಬಿಜೆಪಿಯವರು ದೂರ ಸರಿಯುತ್ತಿದ್ದಾರೆ ಅಂತ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ವ್ಯಂಗ್ಯವಾಡಿದ್ದಾರೆ.

ಇತ್ತೀಚೆಗೆ ಲೋಕಸಭೆಯಲ್ಲಿ ಪ್ರಧಾನಿ ಮೋದಿಯನ್ನು ರಾಹುಲ್ ಗಾಂಧಿ ಅಪ್ಪಿಕೊಂಡ ವಿಚಾರದ ಬಗ್ಗೆ ಈಗಲೂ ಪರ-ವಿರೋಧ ಚರ್ಚೆ ನಡೆಯುತ್ತಿದ್ದು, ಇದೀಗ ಮೋದಿ ಆಲಿಂಗನವನ್ನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಮರ್ಥಿಸಿಕೊಂಡಿದ್ದಾರೆ.

ಕರಣ್ ಥಾಪರ್ ಅವರ ಡೆವಿಲ್ಸ್ ಅಡ್ವೋಕೇಟ್ ಅನ್ ಟೋಲ್ಡ್ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಪಾಲ್ಗೊಂಡಿದ್ದರು. ಈ ವೇಳೆ ಅಲ್ಲಿಯೇ ಉಪಸ್ಥಿತರಿದ್ದ ಅಡ್ವಾಣಿ ಅವರನ್ನು ಉದ್ದೇಶಿಸಿ ರಾಜಕೀಯವಾಗಿ ನಮ್ಮ ನಡುವೆ ಏನೇ ಭಿನ್ನಾಭಿಪ್ರಾಯ ಇರಬಹುದು. ಹಾಗಂತ ದ್ವೇಷ ಸಾಧಿಸಲ್ಲ. ಅವರನ್ನ ಅಪ್ಪಿಕೊಂಡು ಪ್ರೀತಿ ತೋರುತ್ತೇನೆ ಅಂತ ಹೇಳುವ ಮೂಲಕ ತಾನು ಪ್ರಧಾನಿ ಮೋದಿಯವರನ್ನು ಅಪ್ಪಿಕೊಂಡ ವಿಚಾರವನ್ನು ಸಮರ್ಥಿಸಿಕೊಂಡರು.

ಇದೇ ವೇಳೆ ನಾನು ಮೋದಿಯವರನ್ನು ಅಪ್ಪಿಕೊಂಡ ಬಳಿಕ ಇದೀಗ ಬಿಜೆಪಿಯವರು ನನ್ನ ಕಂಡ್ರೆ ಎಲ್ಲಿ ಅಪ್ಪಿಕೊಳ್ಳುತ್ತಾನೋ ಅಂತ ದೂರ ಸರಿಯುತ್ತಾರೆ ಅಂತ ರಾಹುಲ್ ತಮಾಷೆಯ ಮಾತುಗಳನ್ನಾಡಿದ್ರು.

ಕಳೆದ ಶುಕ್ರವಾರ ಅವಿಶ್ವಾಸ ನಿರ್ಣಯ ಚರ್ಚೆಯ ವೇಳೆ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿಯವರನ್ನು ಸೋಲಿಸಲು ನಿಮ್ಮ ಪಕ್ಷದಲ್ಲಿಯೇ ಷಡ್ಯಂತ್ರ ರಚಿತವಾಗಿದೆ. ಬಿಜೆಪಿ, ಆರ್ ಎಸ್‍ಎಸ್ ಗಳಿಗೆ ನಾನು ತುಂಬಾ ಆಭಾರಿಯಾಗಿದ್ದೇನೆ. ನನಗೆ ಹಿಂದೂಸ್ತಾನ್, ಭಾರತ, ಹಿಂದೂ, ನನ್ನ ಧರ್ಮದ ಬಗ್ಗೆ ಹೇಳಿಕೊಟ್ಟಿದ್ದೀರಿ. ನಾನು ಈ ವಿಷಯಕ್ಕಾಗಿ ನಿಮಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳುತ್ತಾ ನೇರವಾಗಿ ಮೋದಿಯವರ ಬಳಿ ತೆರಳಿ ಅಪ್ಪಿಕೊಂಡು ಕೈ ಕುಲುಕಿ ಬರುವ ಮೂಲಕ ಲೋಕಸಭೆಯಲ್ಲಿ ಅಚ್ಚರಿ ಮೂಡಿಸಿದ್ದರು.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

9 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

12 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

12 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

12 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

12 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

13 hours ago