ನವದೆಹಲಿ: ನನ್ನನ್ನು ಕಂಡರೆ ಎಲ್ಲಿ ಅಪ್ಪಿಕೊಳ್ಳುತ್ತಾರೋ ಅಂತಾ ಬಿಜೆಪಿಯವರು ದೂರ ಸರಿಯುತ್ತಿದ್ದಾರೆ ಅಂತ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ವ್ಯಂಗ್ಯವಾಡಿದ್ದಾರೆ.
ಇತ್ತೀಚೆಗೆ ಲೋಕಸಭೆಯಲ್ಲಿ ಪ್ರಧಾನಿ ಮೋದಿಯನ್ನು ರಾಹುಲ್ ಗಾಂಧಿ ಅಪ್ಪಿಕೊಂಡ ವಿಚಾರದ ಬಗ್ಗೆ ಈಗಲೂ ಪರ-ವಿರೋಧ ಚರ್ಚೆ ನಡೆಯುತ್ತಿದ್ದು, ಇದೀಗ ಮೋದಿ ಆಲಿಂಗನವನ್ನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಮರ್ಥಿಸಿಕೊಂಡಿದ್ದಾರೆ.
ಕರಣ್ ಥಾಪರ್ ಅವರ ಡೆವಿಲ್ಸ್ ಅಡ್ವೋಕೇಟ್ ಅನ್ ಟೋಲ್ಡ್ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಪಾಲ್ಗೊಂಡಿದ್ದರು. ಈ ವೇಳೆ ಅಲ್ಲಿಯೇ ಉಪಸ್ಥಿತರಿದ್ದ ಅಡ್ವಾಣಿ ಅವರನ್ನು ಉದ್ದೇಶಿಸಿ ರಾಜಕೀಯವಾಗಿ ನಮ್ಮ ನಡುವೆ ಏನೇ ಭಿನ್ನಾಭಿಪ್ರಾಯ ಇರಬಹುದು. ಹಾಗಂತ ದ್ವೇಷ ಸಾಧಿಸಲ್ಲ. ಅವರನ್ನ ಅಪ್ಪಿಕೊಂಡು ಪ್ರೀತಿ ತೋರುತ್ತೇನೆ ಅಂತ ಹೇಳುವ ಮೂಲಕ ತಾನು ಪ್ರಧಾನಿ ಮೋದಿಯವರನ್ನು ಅಪ್ಪಿಕೊಂಡ ವಿಚಾರವನ್ನು ಸಮರ್ಥಿಸಿಕೊಂಡರು.
ಇದೇ ವೇಳೆ ನಾನು ಮೋದಿಯವರನ್ನು ಅಪ್ಪಿಕೊಂಡ ಬಳಿಕ ಇದೀಗ ಬಿಜೆಪಿಯವರು ನನ್ನ ಕಂಡ್ರೆ ಎಲ್ಲಿ ಅಪ್ಪಿಕೊಳ್ಳುತ್ತಾನೋ ಅಂತ ದೂರ ಸರಿಯುತ್ತಾರೆ ಅಂತ ರಾಹುಲ್ ತಮಾಷೆಯ ಮಾತುಗಳನ್ನಾಡಿದ್ರು.
ಕಳೆದ ಶುಕ್ರವಾರ ಅವಿಶ್ವಾಸ ನಿರ್ಣಯ ಚರ್ಚೆಯ ವೇಳೆ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿಯವರನ್ನು ಸೋಲಿಸಲು ನಿಮ್ಮ ಪಕ್ಷದಲ್ಲಿಯೇ ಷಡ್ಯಂತ್ರ ರಚಿತವಾಗಿದೆ. ಬಿಜೆಪಿ, ಆರ್ ಎಸ್ಎಸ್ ಗಳಿಗೆ ನಾನು ತುಂಬಾ ಆಭಾರಿಯಾಗಿದ್ದೇನೆ. ನನಗೆ ಹಿಂದೂಸ್ತಾನ್, ಭಾರತ, ಹಿಂದೂ, ನನ್ನ ಧರ್ಮದ ಬಗ್ಗೆ ಹೇಳಿಕೊಟ್ಟಿದ್ದೀರಿ. ನಾನು ಈ ವಿಷಯಕ್ಕಾಗಿ ನಿಮಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳುತ್ತಾ ನೇರವಾಗಿ ಮೋದಿಯವರ ಬಳಿ ತೆರಳಿ ಅಪ್ಪಿಕೊಂಡು ಕೈ ಕುಲುಕಿ ಬರುವ ಮೂಲಕ ಲೋಕಸಭೆಯಲ್ಲಿ ಅಚ್ಚರಿ ಮೂಡಿಸಿದ್ದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…