Featured

ನನ್ನನ್ನು ಕ್ಷೇತ್ರದ ಜನತೆ ಬೆಂಬಲಿಸುವುದರಲ್ಲಿ ಯಾವುದೇ ಸಂಶಯವಿಲ್ಲ : ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ – Vishwanews24

ಉಡುಪಿ: ಸರ್ವರಿಗೂ ಸಮಬಾಳು, ಸಮಪಾಲು ಸಿದ್ಧಾಂತದ ಸಂವಿಧಾನವನ್ನು ನೀಡುವ ಮೂಲಕ ದೇಶದ ಜನರ ಜೀವನಮಟ್ಟವನ್ನು ಉನ್ನತಿಗೇರಿಸಿದ ಕೀರ್ತಿ ಕಾಂಗ್ರೆಸ್‌ ಪಕ್ಷದ್ದಾಗಿದೆ. ಶಿಕ್ಷಣ, ಆರೋಗ್ಯ, ವಿಜ್ಞಾನ, ಬ್ಯಾಂಕಿಂಗ್‌, ಕೃಷಿ ಮುಂತಾದ ಕ್ಷೇತ್ರಗಳಿಗೆ ಕಾಂಗ್ರೆಸ್‌ ಪಕ್ಷದ ಅಧಿಕಾರದ ಅವಧಿಯಲ್ಲಿ ಪ್ರಾಧಾನ್ಯ ನೀಡುವ ಮೂಲಕ ವಿಶ್ವದ ಮುಂದುವರಿದ ರಾಷ್ಟ್ರಗಳ ಸಾಲಿನಲ್ಲಿ ನಮ್ಮ ಭಾರತ ದೇಶವು ಮುಂಚೂಣಿ ಸ್ಥಾನಕ್ಕೇರಲು ಸಾಧ್ಯವಾಯಿತು ಎಂದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಕಳಸದಲ್ಲಿ ನಡೆದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್‌ ಎಂದರೆ ಅದು ಕೇವಲ ಪಕ್ಷವಲ್ಲ. ಅದು ಅಭಿವೃದ್ಧಿಯ ಸಂಕೇತವೂ ಹೌದು. ಸಿದ್ಧರಾಮಯ್ಯ ಆಡಳಿತ ಅವಧಿಯಲ್ಲಿ ಕರ್ನಾಟಕ ರಾಜ್ಯ ಸಮಗ್ರ ಅಭಿವೃದ್ಧಿಯನ್ನು ಕಂಡಿತ್ತಲ್ಲದೆ ಅನ್ನ ಭಾಗ್ಯ, ಪಶುಭಾಗ್ಯ ಯೋಜನೆ, ವಸತಿ ಯೋಜನೆ, ಮನಸ್ವಿನಿ, ಮಾತೃಪೂರ್ಣ, ವಿದ್ಯಾಸಿರಿ, ಶಾದಿ ಭಾಗ್ಯ, ಅನಿಲ ಭಾಗ್ಯ, ಅಂಗವಿಕಲ ವೇತನ ಮತ್ತು ವೃದ್ದಾಪ್ಯವೇತನ, ಪುನರ್‌ಬೆಳಕು ಯೋಜನೆಗಳಂತಹ ಎಲ್ಲ ವರ್ಗಗಳಿಗೂ ಬೆಂಬಲ ನೀಡುವ ಯೋಜನೆಗಳನ್ನು ರೂಪಿಸಲಾಗಿತ್ತು. ರಾಜ್ಯದ 6.5 ಕೋಟಿ ಜನರ ಪೈಕಿ ಶೇ.95 ರಷ್ಟು ಜನರು ಜಾತಿ ಬೇಧ ಮರೆತು ಈ ಯೋಜನೆಯ ಫ‌ಲಾನುಭವಿಗಳಾಗಿದ್ದಾರೆ. ಜನರಿಗೆ ಮೂಲಸೌಕರ್ಯವನ್ನು ಒದಗಿಸಿಕೊಟ್ಟಿರುವುದು ಅಲ್ಲದೆ ಗ್ರಾಮೀಣಾಭಿವೃದ್ಧಿಗಾಗಿ ಸ್ಮಾರ್ಟ್‌ ಗ್ರಾಮ ಪಂಚಾಯತ್‌, ನಗರಾಭಿವೃದ್ಧಿಗಾಗಿ ಸ್ಮಾಟ್‌ ಸಿಟಿ ಯೋಜನೆಯನ್ನು ರೂಪಿಸಿ ಗ್ರಾಮೀಣ ಹಾಗೂ ನಗರದ ಆಭಿವೃದ್ಧಿಗಾಗಿ ಸರಕಾರ ಹೆಚ್ಚಿನ ಆದ್ಯತೆ ನೀಡಿತ್ತು ಎಂದರು.

ಸಿದ್ಧರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಆಡಳಿತಾವಧಿಯಲ್ಲಿ ರಾಜ್ಯ ದೃಢವಾದ ಬೆಳವಣಿಗೆಯನ್ನು ಕಂಡಿದೆ. ತನ್ನ ಎಲ್ಲ ಆರ್ಥಿಕ ಸುಧಾರಣೆಯಲ್ಲೂ ಏರಿಕೆಯನ್ನು ದಾಖಲಿಸಿದೆ. ಕೇವಲ ಐದು ವರ್ಷಗಳ ಅವಧಿಯಲ್ಲಿ 5 ಲಕ್ಷಕ್ಕಿಂತಲೂ ಮಿಗಿಲಾಗಿ ಉದ್ಯೋಗಗಳನ್ನು ಬೇರೆ ಬೇರೆ ವಲಯಗಳಲ್ಲಿ ಸೃಷ್ಟಿಸಿದೆ. ಕರಾವಳಿ ಪ್ರದೇಶವಾದ ಮಂಗಳೂರು, ಉಡುಪಿ ಮತ್ತು ಕಾರವಾರ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಮತ್ತು ಕೈಗಾರಿಕಾ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿತ್ತು. ಸಿದ್ಧರಾಮಯ್ಯನವರ ಆಡಳಿತಾವಧಿಯಲ್ಲಿ ರೂಪಿಸಲಾಗಿದ್ದ ಯೋಜನೆಗಳೊಂದಿಗೆ ಈಗಿನ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಸರಕಾರವು ಹೊಸ ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದೆ ಎಂದರು.

ಜನಗಳ ಮಧ್ಯೆ ಹೋಗದೆ ಕೆಲಸವನ್ನು ಮಾಡದೆ ಇರುವವರು ಗೆಲ್ಲುತ್ತೇವೆ ಎಂದು ಘಂಟಾಘೋಷವಾಗಿ ಹೇಳುತ್ತಿರುವಾಗ ಜನಸಾಮಾನ್ಯರ ಮಧ್ಯೆ ಇದ್ದು ಕೆಲಸ ಮಾಡಿದ, ಸಚಿವ ಸ್ಥಾನದ ಅವಧಿಯಲ್ಲಿ ಕ್ಷೇತ್ರವನ್ನು ಸಮಗ್ರ ಅಭಿವೃದ್ಧಿ ಪಥದತ್ತ ಕೊಂಡೊಯ್ದ ನನ್ನನ್ನು ಕ್ಷೇತ್ರದ ಜನತೆ ಬೆಂಬಲಿಸುವುದರಲ್ಲಿ ಯಾವುದೇ ಸಂಶಯ ವಿಲ್ಲ. ಮೋದಿ ಅಲೆಯಲ್ಲಿ ಗೆದ್ದವರು ಹೆಸರನ್ನು ಉಳಿಸಿ ಕೊಳ್ಳಲಿಲ್ಲ. ಮೋದಿಯೂ ನೀಡಿದ ಭರವಸೆ ಈಡೇರಿಸಿಲ್ಲ ಎಂದು ಪ್ರಮೋದ್‌ ಮಧ್ವರಾಜ್‌ ಹೇಳಿದರು.ಸಭೆಯಲ್ಲಿ ಮಾಜಿ ಸಚಿವೆ ಮೋಟಮ್ಮ ಮತ್ತು ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಪ್ರಮುಖ ನಾಯಕರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago