ನವದೆಹಲಿ: “ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ…?” ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ.
ಯಾವ ಕೋರ್ಟ್ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ ನನ್ನನ್ನು ಮುಟ್ಟಲಾರರು ಎಂದಿದ್ದಾನೆ.
ಅಹಮದಾಬಾದ್ ಅಪಹರಣ ಮತ್ತು ಅತ್ಯಾಚಾರ ಪ್ರಕರಣವೊಂದರಲ್ಲಿ ಗುಜರಾತ್ ಪೊಲೀಸರು ಈತನಿಗಾಗಿ ಹುಡುಕಾಟ ನಡೆಸಿದ್ದಾರೆ.
ನಿತ್ಯಾನಂದ ಅಜ್ಞಾತ ಸ್ಥಳದಿಂದ ಹೊಸ ವಿಡಿಯೊ ಸಂದೇಶ ಹರಿಬಿಟ್ಟಿದ್ದು, ಅದೀಗ ವೈರಲ್ ಆಗಿದೆ. ”ನನ್ನನ್ನು ಯಾರೂ ಟಚ್ ಮಾಡಲು ಸಾಧ್ಯವಿಲ್ಲ. ಯಾವ ನ್ಯಾಯಾಲಯವೂ ನನ್ನನ್ನು ವಿಚಾರಣೆಗೆ ಒಳಪಡಿಸಲು ಸಾಧ್ಯವಿಲ್ಲ.ಸತ್ಯವೇನೆಂದು ನಾನು ಜಗತ್ತಿಗೆ ತೋರಿಸುತ್ತೇನೆ. ನಾನು ಪರಮಶಿವ” ಎಂದು ನಿತ್ಯಾನಂದ ಹೇಳುತ್ತಿರುವುದು ವಿಡಿಯೊದಲ್ಲಿದೆ. ಅಜ್ಞಾತ ಸ್ಥಳದಿಂದ ಈ ವಿಡಿಯೊ ಟ್ವೀಟ್ ಮಾಡಲಾಗಿದೆ.
ವಿವಾದಿತ ದೇವಮಾನವ ನಿತ್ಯಾನಂದ ಸ್ವಾಮಿಯ ಪಾಸ್ಪೋರ್ಟ್ ಅರ್ಜಿಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿರಸ್ಕರಿಸಿತ್ತು. ವಿದೇಶದಲ್ಲಿ ನಿತ್ಯಾನಂದನ ಚಲನವಲನಗಳು ಮತ್ತು ಆತನ ಪೋಸ್ಟ್ಗಳನ್ನು ಇಲಾಖೆ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ರವೀಶ್ ಕುಮಾರ್ ಶುಕ್ರವಾರ ತಿಳಿಸಿದ್ದಾರೆ.
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…