ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು ಬರದಿರಿ ; ಅಭಿಮಾನಿಗಳ ಪರ ಚಾಲೆಂಜಿಂಗ್ ಸ್ಟಾರ್ -Vishwanews24

Featured, ರಾಜ್ಯ ನ್ಯೂಸ್, ಸಿನಿಮಾ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು ಬರದಿರಿ ಎಂದು ಟ್ವೀಟ್ ಮಾಡಿದ್ದಾರೆ.

ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಸದ್ಯಕ್ಕೆ ನಾನು ಬೆಂಗಳೂರಿನಲ್ಲಿ ಇಲ್ಲ, ಶೂಟಿಂಗ್ ಅಲ್ಲಿ ಬ್ಯುಸಿಯಾಗಿದ್ದೇನೆ. ಸದ್ಯಕ್ಕೆ ಕೇಳಿ ಬರುತ್ತಿರುವ ಕೆಲವು ವ್ಯಕ್ತಿಗಳ ಬಗ್ಗೆ ಒಂದು ಕಿವಿಮಾತು – ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು/ಪ್ರಚೋದಿಸಲು ಬರದಿರಿ” ಎಂದು ಟ್ವೀಟ್ ಮಾಡಿದ್ದಾರೆ.

 

ಸೋಮವಾರ ಪೈಲ್ವಾನ್ ಚಿತ್ರ ಪೈರಸಿಯಾಗಿದೆ ಎಂದು ಚಿತ್ರದ ನಿರ್ಮಾಪಕಿ ಸ್ವಪ್ನ ಕೃಷ್ಣ ಅವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು.

ಪೈಲ್ವಾನ್​ ಚಿತ್ರ ಬಿಡುಗಡೆಯಾದಾಗಿನಿಂದ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆವೊಂದು ನಡೆಯುತ್ತಿದೆ. ಪೈಲ್ವಾನ್ ಸಿನಿಮಾ​ ಚೆನ್ನಾಗಿದೆ. ಆದರೂ, ದರ್ಶನ್​ ಅಭಿಮಾನಿಗಳು ಚೆನ್ನಾಗಿಲ್ಲ ಎಂದು ಖಾಲಿ ಚಿತ್ರಮಂದಿರಗಳ ಸುಳ್ಳು ಫೋಟೊಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸುದೀಪ್​ ಅಭಿಮಾನಿಗಳು ಆರೋಪಿಸಿದ್ದಾರೆ. ಅಲ್ಲದೆ, ಪೈರಸಿಯನ್ನು ಮಾಡಿದ್ದಾರೆ ಎಂದು ದೂರಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ದರ್ಶನ್​ ಅಭಿಮಾನಿಗಳು ಸುಮ್ಮನೇ ನಮ್ಮ ಮೇಲೆ ಗೂಬೆ ಕೂರಿಸಬೇಡಿ. ತಮಿಳು ರಾಕರ್ಸ್​ ವೆಬ್​ಸೈಟ್​ನಲ್ಲಿ ಚಿತ್ರ ಲೀಕ್​ ಆಗಿದೆ. ಅವರನ್ನು ಕೇಳುವುದನ್ನು ಬಿಟ್ಟು ನಮ್ಮ ಮೇಲೆ ಸವಾರಿ ಮಾಡಬೇಡಿ ಎಂದು ಜಾಲತಾಣದಲ್ಲಿ ಸಂದೇಶವನ್ನು ಹರಿಬಿಟ್ಟಿದ್ದಾರೆ.