Featured

ನನ್ನ ಅಮೃತ ಮಹೋತ್ಸವದಲ್ಲಿ ಸೇರಿದ್ದ ಜನಸ್ತೋಮ ನೋಡಿ ಬಿಜೆಪಿಯವರಿಗೆ ಭಯ ಬಂದಿದೆ : ಸಿದ್ದರಾಮಯ್ಯ – Vishwanews24

ನನ್ನ ಅಮೃತ ಮಹೋತ್ಸವದಲ್ಲಿ ಸೇರಿದ್ದ ಜನಸ್ತೋಮ ನೋಡಿ ಬಿಜೆಪಿಯವರಿಗೆ ಭಯ

ಬಂದಿದೆ : ಸಿದ್ದರಾಮಯ್ಯ

ಮೈಸೂರು: ‘ದಾವಣಗೆರೆಯಲ್ಲಿ ನಡೆದ ನನ್ನ ಅಮೃತ ಮಹೋತ್ಸವದಲ್ಲಿ ಸೇರಿದ್ದ ಜನಸ್ತೋಮ ನೋಡಿ ಬಿಜೆಪಿಯವರಿಗೆ ಭಯ ಬಂದಿದೆ’ ಎಂದು‌ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ‘ಭಯ ಬಂದಿರುವುದರಿಂದಲೇ ಇನ್ನೂ ವ್ಯರ್ಥ ಟೀಕೆಗಳನ್ನು ‌ಮಾಡುತ್ತಿದ್ದಾರೆ’ ಎಂಟು ಟೀಕಿಸಿದರು.

‘ಅಹಿಂದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆಸಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಆ ಮಾತಿನಲ್ಲಿ ಸತ್ಯವಿರುತ್ತದೆ. ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು ಹಾಗೂ ದಲಿತರ ಮತಗಳು ಕಾಂಗ್ರೆಸ್ ಪರವಾಗಿ ಇರುತ್ತವೆ. ಆ ಕಾರಣದಿಂದ ಆ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಡಿಲೀಟ್ ಮಾಡುವ ಕೆಲಸ ನಡೆದಿರಬಹುದು. ಆ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುತ್ತೇನೆ’ ಎಂದು ಪ್ರತಿಕ್ರಿಯಿಸಿದರು.

‘ಹರ್ ಘರ್ ತಿರಂಗ ಕಾರ್ಯಕ್ರಮವು ಬಿಜೆಪಿಯವರ ನಾಟಕದ ಉಪಕ್ರಮ. ಬಿಜೆಪಿಯವರು ರಾಷ್ಟ್ರ ಬಾವುಟಕ್ಕೆ  ಗೌರವ ಕೊಟ್ಟವರಲ್ಲ. ಅವರು ರಾಷ್ಟ್ರಗೀತೆ, ಬಾವುಟವನ್ನು ವಿರೋಧಿಸುತ್ತಿದ್ದವರು. ಅವರಿಗೆ ನಮ್ಮ ಬಾವುಟದ ಮೇಲೆ ನಂಬಿಕೆ ಇಲ್ಲ. ಸ್ವಾತಂತ್ರ್ಯದ ಅಮೃತ ಮಹೋತ್ಸವನ್ನು ರಾಜಕೀಕರಣ ಮಾಡಲು ಆ ಪಕ್ಷದವರು ಮುಂದಾಗಿದ್ದಾರೆ’ ಎಂದು ಆರೋಪಿಸಿದರು.

ಕಾರ್ಕಳ: ದೇಶದ ಪಾಲಿಗೆ ಕಾಂಗ್ರೆಸ್ ಮುಳುವು : ಸುನಿಲ್‌ಕುಮಾರ್ – Vishwanews24

ಧ್ವಜಸಂಹಿತೆ ತಿದ್ದುಪಡಿ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಸಿದ್ದರಾಮಯ್ಯ,   ‘ರಾಷ್ಟ್ರಧ್ವಜವನ್ನು ಖಾದಿ ಅಥವಾ ರೇಷ್ಮೆಯಲ್ಲೇ ಮಾಡಬೇಕು. ಇವರು ಚೀನಾದಿಂದ ಆಮದು ಮಾಡಿಸಿಕೊಳ್ಳುತ್ತಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಚೀನಾದಿಂದ ಆಮದು ಹೆಚ್ಚಾಗಿದೆ. ಹಾಗಾದರೆ ಅತ್ಮನಿರ್ಭರ ಭಾರತ ಎನ್ನುವುದು ಎಲ್ಲಿ ಯಶಸ್ವಿಯಾಯಿತು?’ ಎಂದು ವ್ಯಂಗ್ಯವಾಗಿ ಕೇಳಿದರು.

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

9 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

9 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

9 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

9 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago