ಮೈಸೂರು: ‘ದಾವಣಗೆರೆಯಲ್ಲಿ ನಡೆದ ನನ್ನ ಅಮೃತ ಮಹೋತ್ಸವದಲ್ಲಿ ಸೇರಿದ್ದ ಜನಸ್ತೋಮ ನೋಡಿ ಬಿಜೆಪಿಯವರಿಗೆ ಭಯ ಬಂದಿದೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ‘ಭಯ ಬಂದಿರುವುದರಿಂದಲೇ ಇನ್ನೂ ವ್ಯರ್ಥ ಟೀಕೆಗಳನ್ನು ಮಾಡುತ್ತಿದ್ದಾರೆ’ ಎಂಟು ಟೀಕಿಸಿದರು.
‘ಅಹಿಂದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆಸಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಆ ಮಾತಿನಲ್ಲಿ ಸತ್ಯವಿರುತ್ತದೆ. ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು ಹಾಗೂ ದಲಿತರ ಮತಗಳು ಕಾಂಗ್ರೆಸ್ ಪರವಾಗಿ ಇರುತ್ತವೆ. ಆ ಕಾರಣದಿಂದ ಆ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಡಿಲೀಟ್ ಮಾಡುವ ಕೆಲಸ ನಡೆದಿರಬಹುದು. ಆ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುತ್ತೇನೆ’ ಎಂದು ಪ್ರತಿಕ್ರಿಯಿಸಿದರು.
‘ಹರ್ ಘರ್ ತಿರಂಗ ಕಾರ್ಯಕ್ರಮವು ಬಿಜೆಪಿಯವರ ನಾಟಕದ ಉಪಕ್ರಮ. ಬಿಜೆಪಿಯವರು ರಾಷ್ಟ್ರ ಬಾವುಟಕ್ಕೆ ಗೌರವ ಕೊಟ್ಟವರಲ್ಲ. ಅವರು ರಾಷ್ಟ್ರಗೀತೆ, ಬಾವುಟವನ್ನು ವಿರೋಧಿಸುತ್ತಿದ್ದವರು. ಅವರಿಗೆ ನಮ್ಮ ಬಾವುಟದ ಮೇಲೆ ನಂಬಿಕೆ ಇಲ್ಲ. ಸ್ವಾತಂತ್ರ್ಯದ ಅಮೃತ ಮಹೋತ್ಸವನ್ನು ರಾಜಕೀಕರಣ ಮಾಡಲು ಆ ಪಕ್ಷದವರು ಮುಂದಾಗಿದ್ದಾರೆ’ ಎಂದು ಆರೋಪಿಸಿದರು.
ಕಾರ್ಕಳ: ದೇಶದ ಪಾಲಿಗೆ ಕಾಂಗ್ರೆಸ್ ಮುಳುವು : ಸುನಿಲ್ಕುಮಾರ್ – Vishwanews24
ಧ್ವಜಸಂಹಿತೆ ತಿದ್ದುಪಡಿ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಸಿದ್ದರಾಮಯ್ಯ, ‘ರಾಷ್ಟ್ರಧ್ವಜವನ್ನು ಖಾದಿ ಅಥವಾ ರೇಷ್ಮೆಯಲ್ಲೇ ಮಾಡಬೇಕು. ಇವರು ಚೀನಾದಿಂದ ಆಮದು ಮಾಡಿಸಿಕೊಳ್ಳುತ್ತಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಚೀನಾದಿಂದ ಆಮದು ಹೆಚ್ಚಾಗಿದೆ. ಹಾಗಾದರೆ ಅತ್ಮನಿರ್ಭರ ಭಾರತ ಎನ್ನುವುದು ಎಲ್ಲಿ ಯಶಸ್ವಿಯಾಯಿತು?’ ಎಂದು ವ್ಯಂಗ್ಯವಾಗಿ ಕೇಳಿದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…