ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ? ಅದಕ್ಕೆ ಸಚಿವ ಸಂಪುಟ ಪುನಾರಚನೆ ವೇಳೆ ಕಡೇ ಕ್ಷಣದಲ್ಲಿ ಕೈ ಬಿಟ್ಟಿದ್ದಾರೆ ಎಂದು ಮಾಜಿ ಸಚಿವ ಮಂಕಾಳ ವೈದ್ಯ ಬೇಸರ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಂದು ಬೆಳಗ್ಗೆ 10 ಗಂಟೆಗೆ ಸ್ವತಃ ಸಿಎಂ ಕರೆ ಮಾಡಿ ಪ್ರಮಾಣವಚನಕ್ಕೆ ಬನ್ನಿ ಎಂದು ಹೇಳಿದರು. ಆದರೆ, 11 ಗಂಟೆಗೆ ಮತ್ತೆ ಕರೆ ಮಾಡಿ ನಿಮ್ಮ ಹೆಸರು ಕೈಬಿಟ್ಟಿದ್ದೇವೆ, ಮಲ್ಲಣ್ಣಗೆ ಅವಕಾಶ ಕೊಟ್ಟಿದ್ದೇವೆ ಎಂದರು. ಆ ನಡುವೆ ಏನೇನು ನಡೆಯಿತು ಎಂಬುದು ಗೊತ್ತಿಲ್ಲ. ಯಾರಿಗೆ ಅನ್ಯಾಯ, ಯಾವ ಭಾಗಕ್ಕೆ ಅನ್ಯಾಯವಾಯಿತು ಎಂಬುದನ್ನು ನಾವು ಹೇಳಿದರೂ ಅದು ಮಾತಲ್ಲೇ ಉಳಿಯುತ್ತದೆ ಎಂದರು.
ನನ್ನ ಅವಶ್ಯಕತೆ ಇರಲಿಲ್ಲವೇನೋ, ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟಿದ್ದಾರೆ. ಆದರೆ ಇಂತಹದೇ ಉದ್ದೇಶಕ್ಕೆ ಕೈಬಿಟ್ಟಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಮಂತ್ರಿಯಾಗಿ ಮೂರು ವರ್ಷಗಳ ಕಾಲ ಒಳ್ಳೆಯ ಕೆಲಸ ಮಾಡಿದ್ದೇನೆ. ಯಾವುದೇ ಕೆಟ್ಟ ಹೆಸರು ತಂದುಕೊಂಡಿಲ್ಲ, ನನಗೆ ಅಷ್ಟು ಸಾಕು ಎಂದು ಹೇಳಿದರು.
ಸಂಪುಟ ಪುನಾರಚನೆ ವೇಳೆ ಕೊನೆ ಕ್ಷಣದಲ್ಲಿ ತಮ್ಮ ಹೆಸರು ಕೈಬಿಟ್ಟಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…
ಕೊಟ್ಟಿಗೆಹಾರ: ಭೀಕರ ರಸ್ತೆ ಅಪಘಾತ ; ಲಾರಿಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು ಕೊಟ್ಟಿಗೆಹಾರ: ವಿಲ್ಪುರಂ - ಮಂಗಳೂರು…
ಹೆಬ್ರಿ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತ್ಯು ಉಡುಪಿ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು…