ಬೆಂಗಳೂರು: ‘ನನ್ನ ಇಪ್ಪತ್ತೈದು ವರ್ಷಗಳ ರಾಜಕಾರಣದಲ್ಲಿ ಈ ರೀತಿ ಅಪಾದನೆ ಯಾವತ್ತೂ ಬಂದಿಲ್ಲ. ನಾನು ನಿಷ್ಕಳಂಕ ರಾಜಕಾರಣಿ, ನನಗೆ ಹಿಂಸೆ ಕೊಟ್ಟು ಮಾಡದ ತಪ್ಪನ್ನು ಒಪ್ಪಿಕೊಳ್ಳುವಂತೆ ಎಸ್ಐಟಿ ಅಧಿಕಾರಿಗಳು ಒತ್ತಡಹಾಕಿದರು’ ಎಂದು ಎಸ್ ಐಟಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ಎಚ್.ಡಿ.ರೇವಣ್ಣ ಅವರು ನ್ಯಾಯಾಧೀಶರ ಎದುರು ಹೇಳಿದ್ದಾರೆ.
ಲೈಂಗಿಕ ಹಗರಣದ ಶೋಷಿತ ಮಹಿಳೆ ಅಪಹರಣ ಪ್ರಕರಣ ಸಂಬಂಧ ಪೊಲೀಸ್ ಕಸ್ಟಡಿ ಮುಗಿದ ಹಿನ್ನಲೆಯಲ್ಲಿ ಬುಧವಾರ ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಈ ವೇಳೆ ನ್ಯಾಯಾಧೀಶರು, ರೇವಣ್ಣ ಅವರಿಗೆ ಪ್ರಕರಣ ಕುರಿತು ವಿಚಾರಿಸಿದರು. ಆಗ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ ರೇವಣ, ರಾಜಕೀಯ ಷಡ್ಕಂತ್ರ ನನ್ನನ್ನು ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂದು ಅಳಲು ತೋಡಿಕೊಂಡರು.
“ನಾನು 25 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ಎಂದಿಗೂ ಈ ರೀತಿ ಅಪಾದನೆ ಬಂದಿಲ್ಲ. ನಾನು ನಿಷ್ಕಳಂಕ ರಾಜಕಾರಣಿಯಾಗಿದ್ದೇನೆ. ನಾನು ತಪ್ಪು ಮಾಡಿಲ್ಲ. ಮಹಿಳೆ ಅಪಹರಣ ನಡೆದ ದಿನ ನಾನು ಊರಿನಲ್ಲೇ ಇರಲಿಲ್ಲ. ನಾನು ಯಾರಿಗೂ ಕರೆ ಮಾಡಿ ಮಾತು ಸಹ ಆಡಿಲ್ಲ. ಹೀಗಿದ್ದರೂ ನನ್ನನ್ನು ಮಹಿಳೆ ಅಪಹರಣದಲ್ಲಿ ಆರೋಪಿ ಮಾಡಿದ್ದಾರೆ’ ಎಂದು ತಿಳಿಸಿದರು.
‘ನನಗೆ ಎಸ್ಐಟಿ ಅಧಿಕಾರಿಗಳು ವಿವ ದೀತ ತೊಂದರೆ ಕೊಟ್ಟಿದ್ದಾರೆ. ವೈದ್ಯರು ಚಿಕಿತ್ಸೆ ಕೊಡಿಸುವಂತೆ ಹೇಳಿದರೂ ಕೂಡ ನನಗೆ ಸೂಕ್ತವಾದ ವೈದ್ಯಕೀಯ ಚಿಕಿತ್ಸೆ ಯನ್ನು ಅಧಿಕಾರಿಗಳು ಕೊಡಿಸಿಲ್ಲ. ನಿನ್ನೆ ವಿಚಾರಣೆ ಎಲ್ಲ ಮುಗಿದಿದೆ ಎಂದು ಹೇಳಿ. ನನ್ನನ್ನು ಆಸ್ಪತ್ರೆಯಿಂದ ಅಧಿಕಾರಿಗಳು ಕರೆ ತಂದರು. ಆದರೆ ಇಂದು ಬೆಳಗ್ಗೆ ಮತ್ತೆ 2 ಗಂಟೆಗಳು ವಿಚಾರಣೆ ಮಾಡಿ ನನಗೆ ಕಿರು ಕುಳ ಕೊಟ್ಟಿದ್ದಾರೆ. ನಾನು ಮಾಡದ ತಪ್ಪನ್ನು ಒಪ್ಪಿಕೊಳ್ಳುವಂತೆ ಅಧಿಕಾರಿಗಳು ಒತ್ತಡ ಹಾಕಿದರು. ಮಾಡದ ತಪ್ಪನ್ನು ಹೇಗೆ ಒಪ್ಪಿ ಕೊಳ್ಳಲಿ ಎಂದು ರೇವಣ್ಣನಿವೇದಿಸಿದರು.
ನಾನು ನನ್ನ ಕೈಲಾದ ಮಟ್ಟಿಗೆ ಅಧಿಕಾರಿ ಗಳ ತನಿಖೆಗೆ ಸಹಕರಿಸಿದ್ದೇನೆ. ಅವರ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಇದಕ್ಕಿಂತ ಅನ್ನು ತನಿಖೆಗೆ ಸಹರಿಸಲು ನನ್ನಿಂದ ಸಾಧ್ಯವಿಲ್ಲ ಕಳೆದ ಮೂರು ದಿನಗಳಿಂದ ನಾನು ನಿದ್ದೆ ಮಾಡಿಲ್ಲ. ನನಗೆ ಆರೋಗ್ಯ ಸಮಸ್ಯೆ ಇದೆ. ನಾನು ಸಭ್ಯ ರಾಜಕಾರಣ ಮಾಡಿದ್ದೇನೆ. ಕಾನೂನಿಗೆ ತಲೆಬಾಗಿ ನಡೆದುಕೊಂಡಿದ್ದೇನೆ ಎಂದು ಭಾವುಕರಾಗಿ ನುಡಿದರು.
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…