ಬೆಂಗಳೂರು: ‘ನನ್ನ ಇಪ್ಪತ್ತೈದು ವರ್ಷಗಳ ರಾಜಕಾರಣದಲ್ಲಿ ಈ ರೀತಿ ಅಪಾದನೆ ಯಾವತ್ತೂ ಬಂದಿಲ್ಲ. ನಾನು ನಿಷ್ಕಳಂಕ ರಾಜಕಾರಣಿ, ನನಗೆ ಹಿಂಸೆ ಕೊಟ್ಟು ಮಾಡದ ತಪ್ಪನ್ನು ಒಪ್ಪಿಕೊಳ್ಳುವಂತೆ ಎಸ್ಐಟಿ ಅಧಿಕಾರಿಗಳು ಒತ್ತಡಹಾಕಿದರು’ ಎಂದು ಎಸ್ ಐಟಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ಎಚ್.ಡಿ.ರೇವಣ್ಣ ಅವರು ನ್ಯಾಯಾಧೀಶರ ಎದುರು ಹೇಳಿದ್ದಾರೆ.
ಲೈಂಗಿಕ ಹಗರಣದ ಶೋಷಿತ ಮಹಿಳೆ ಅಪಹರಣ ಪ್ರಕರಣ ಸಂಬಂಧ ಪೊಲೀಸ್ ಕಸ್ಟಡಿ ಮುಗಿದ ಹಿನ್ನಲೆಯಲ್ಲಿ ಬುಧವಾರ ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಈ ವೇಳೆ ನ್ಯಾಯಾಧೀಶರು, ರೇವಣ್ಣ ಅವರಿಗೆ ಪ್ರಕರಣ ಕುರಿತು ವಿಚಾರಿಸಿದರು. ಆಗ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ ರೇವಣ, ರಾಜಕೀಯ ಷಡ್ಕಂತ್ರ ನನ್ನನ್ನು ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂದು ಅಳಲು ತೋಡಿಕೊಂಡರು.
“ನಾನು 25 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ಎಂದಿಗೂ ಈ ರೀತಿ ಅಪಾದನೆ ಬಂದಿಲ್ಲ. ನಾನು ನಿಷ್ಕಳಂಕ ರಾಜಕಾರಣಿಯಾಗಿದ್ದೇನೆ. ನಾನು ತಪ್ಪು ಮಾಡಿಲ್ಲ. ಮಹಿಳೆ ಅಪಹರಣ ನಡೆದ ದಿನ ನಾನು ಊರಿನಲ್ಲೇ ಇರಲಿಲ್ಲ. ನಾನು ಯಾರಿಗೂ ಕರೆ ಮಾಡಿ ಮಾತು ಸಹ ಆಡಿಲ್ಲ. ಹೀಗಿದ್ದರೂ ನನ್ನನ್ನು ಮಹಿಳೆ ಅಪಹರಣದಲ್ಲಿ ಆರೋಪಿ ಮಾಡಿದ್ದಾರೆ’ ಎಂದು ತಿಳಿಸಿದರು.
‘ನನಗೆ ಎಸ್ಐಟಿ ಅಧಿಕಾರಿಗಳು ವಿವ ದೀತ ತೊಂದರೆ ಕೊಟ್ಟಿದ್ದಾರೆ. ವೈದ್ಯರು ಚಿಕಿತ್ಸೆ ಕೊಡಿಸುವಂತೆ ಹೇಳಿದರೂ ಕೂಡ ನನಗೆ ಸೂಕ್ತವಾದ ವೈದ್ಯಕೀಯ ಚಿಕಿತ್ಸೆ ಯನ್ನು ಅಧಿಕಾರಿಗಳು ಕೊಡಿಸಿಲ್ಲ. ನಿನ್ನೆ ವಿಚಾರಣೆ ಎಲ್ಲ ಮುಗಿದಿದೆ ಎಂದು ಹೇಳಿ. ನನ್ನನ್ನು ಆಸ್ಪತ್ರೆಯಿಂದ ಅಧಿಕಾರಿಗಳು ಕರೆ ತಂದರು. ಆದರೆ ಇಂದು ಬೆಳಗ್ಗೆ ಮತ್ತೆ 2 ಗಂಟೆಗಳು ವಿಚಾರಣೆ ಮಾಡಿ ನನಗೆ ಕಿರು ಕುಳ ಕೊಟ್ಟಿದ್ದಾರೆ. ನಾನು ಮಾಡದ ತಪ್ಪನ್ನು ಒಪ್ಪಿಕೊಳ್ಳುವಂತೆ ಅಧಿಕಾರಿಗಳು ಒತ್ತಡ ಹಾಕಿದರು. ಮಾಡದ ತಪ್ಪನ್ನು ಹೇಗೆ ಒಪ್ಪಿ ಕೊಳ್ಳಲಿ ಎಂದು ರೇವಣ್ಣನಿವೇದಿಸಿದರು.
ನಾನು ನನ್ನ ಕೈಲಾದ ಮಟ್ಟಿಗೆ ಅಧಿಕಾರಿ ಗಳ ತನಿಖೆಗೆ ಸಹಕರಿಸಿದ್ದೇನೆ. ಅವರ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಇದಕ್ಕಿಂತ ಅನ್ನು ತನಿಖೆಗೆ ಸಹರಿಸಲು ನನ್ನಿಂದ ಸಾಧ್ಯವಿಲ್ಲ ಕಳೆದ ಮೂರು ದಿನಗಳಿಂದ ನಾನು ನಿದ್ದೆ ಮಾಡಿಲ್ಲ. ನನಗೆ ಆರೋಗ್ಯ ಸಮಸ್ಯೆ ಇದೆ. ನಾನು ಸಭ್ಯ ರಾಜಕಾರಣ ಮಾಡಿದ್ದೇನೆ. ಕಾನೂನಿಗೆ ತಲೆಬಾಗಿ ನಡೆದುಕೊಂಡಿದ್ದೇನೆ ಎಂದು ಭಾವುಕರಾಗಿ ನುಡಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…