Featured

ನನ್ನ ಉದ್ದೇಶ ಕರ್ನಾಟಕ, ಕನ್ನಡಿಗರ ಅವಮಾನಿಸುವುದಲ್ಲ , ನನ್ನ ಮಾತಿನಿಂದ ನೋವಾಗಿದ್ರೆ ಕ್ಷಮೆಯಿರಲಿ : ಫೋನ್ ಪೇ ಸಿಇಒ ಸಮೀರ್ ನಿಗಮ್ – vishwanews24

ನನ್ನ ಉದ್ದೇಶ ಕರ್ನಾಟಕ, ಕನ್ನಡಿಗರ ಅವಮಾನಿಸುವುದಲ್ಲ , ನನ್ನ ಮಾತಿನಿಂದ ನೋವಾಗಿದ್ರೆ ಕ್ಷಮೆಯಿರಲಿ : ಫೋನ್ ಪೇ ಸಿಇಒ ಸಮೀರ್ ನಿಗಮ್

ನವದೆಹಲಿ : ಕೊನೆಗೂ ಫೋನ್ ಪೇ ಸಿಇಒ ಸಮೀರ್ ನಿಗಮ್ ಭೇಷರತ್ ಕ್ಷಮೆಯಾಚಿಸುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ತಲೆಬಾಗಿದ್ದಾರೆ. “ನನ್ನ ಉದ್ದೇಶ ಕರ್ನಾಟಕ ಅಥವಾ ಕನ್ನಡಿಗರನ್ನು ಅವಮಾನಿಸುವುದಲ್ಲ. ನನ್ನ ಮಾತು ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ” ಎನ್ನುವ ಮೂಲಕ ಕರುನಾಡಿನ ಜನರಲ್ಲಿ ಕ್ಷಮೆಯಾಚಿಸಿದ್ದಾರೆ.

ಕಳೆದ ಕೆಲವು ದಿನಗಳ ಹಿಂದಷ್ಟೇ ಕರ್ನಾಟಕ ಸರ್ಕಾರ ಖಾಸಗಿ ಉದ್ಯೋಗ ಕೋಟಾ ಮಸೂದೆಯನ್ನು ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಸಿತ್ತು. ನಂತರ ಮತ್ತಷ್ಟು ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಾತ್ಕಲಿಕವಾಗಿ ಸ್ಥಗಿತಗೊಳಿಸಿತ್ತು.

ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದ ಸಮೀರ್ ನಿಗಮ್, ಭಾರತದಾತ್ಯಂತ 25,000ಕ್ಕೂ ಅಧಿಕ ಉದ್ಯೋಗಗಳನ್ನು ನಾನು ಸೃಷ್ಟಿಸಿದ್ದೇನೆ. ನನ್ನ ಮಕ್ಕಳು ಕರ್ನಾಟಕದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ ಎಂದು ಪ್ರಶ್ನಿಸಿದ್ದರು. ಈ ಹೇಳಿಕೆಯ ವಿರುದ್ಧ ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಅನೇಕ ಕನ್ನಡಿಗರು ಫೋನ್ ಪೇ ಆ್ಯಪ್ ಅನ್ನು ಅನ್ಇನ್ಸ್ಟಾ ಲ್ ಮಾಡುವಂತೆ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿ ಬಾಯ್ಕಟ್ ಅಭಿಯಾನ ಆರಂಭವಾಗಿದ್ದೇ ತಡ ಇದೀಗ ಟ್ವೀಟ್ ಮೂಲಕ ಕನ್ನಡಿಗರಲ್ಲಿ ಸಮೀರ್ ಕ್ಷಮೆಯಾಚಿಸಿದ್ದಾರೆ.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

19 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

21 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

22 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

22 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

22 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

22 hours ago