ರಾಜ್ಯ ನ್ಯೂಸ್

ನನ್ನ ಕಂಡ್ರೆ ಲವ್ ಜಾಸ್ತಿ, ಅದಕ್ಕೆ ಕಣ್ಣು ಹಾಕ್ತಾರೆ: ಡಿಕೆ ಶಿವಕುಮಾರ್

ಬೆಂಗಳೂರು: ನನ್ನನ್ನ ರೇವಣ್ಣಗೆ ಹೋಲಿಸಬೇಡಿ. ಇಬ್ಬರ ನಡುವೆ ಪವರ್ ಗಲಾಟೆ ಅನ್ನೋದು ತಪ್ಪು. ಅವರು ದೊಡ್ಡ ಕುಟುಂಬದ ಮಕ್ಕಳು ನಾನು ಸಾಮಾನ್ಯ ವ್ಯಕ್ತಿ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಹಣ್ಣು ಪಕ್ವವಾಗಿ ಮರದಲ್ಲಿದ್ದರೆ ಎಲ್ಲಾ ಕಲ್ಲು ಹೊಡಿತಾರೆ. ನೀವು ನೋಡೋಕೆ ಚೆನ್ನಾಗಿದ್ದರೆ ಎಲ್ಲಾ ನೋಡುತ್ತಾರೆ. ಮೋರ್ ಸ್ಟ್ರಾಂಗ್ ಮೋರ್ ಎನಿಮಿಸ್ ಲೆಸ್ ಸ್ಟ್ರಾಂಗ್ ಲೆಸ್ ಎನಿಮಿಸ್. ನನಗು ಹಾಗೆ ಆಗಿದೆ. ನನ್ನ ಕಂಡರೆ ಪ್ರೀತಿ ಜಾಸ್ತಿ ಅದಕ್ಕೆ ನನ್ನ ಮೇಲೆ ಕಣ್ಣು ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಿಬಿಐ ದಾಳಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ನನ್ನ ಕಂಡರೆ ಅಸೂಯೆ ಅದಕ್ಕೆ ಸಿಬಿಐ ಮೂಲಕ ನಿಯಂತ್ರಣ ಮಾಡಲು ಯತ್ನಿಸುತ್ತಿದ್ದಾರೆ. ಸಿಬಿಐ ಅಧಿಕಾರಿಗಳು ಇಲ್ಲಿನ ಅಧಿಕಾರಿಗಳಿಗೆ ಹಿಂಸೆ ಮಾಡುತ್ತಿದ್ದಾರೆ. ಹಣ ವರ್ಗಾವಣೆಯಲ್ಲಿ ಸುರೇಶ್ ಪಾತ್ರ ಇದೆ ಅಂತ ಒಪ್ಪಿಸೋಕೆ ಯತ್ನಿಸಿದ್ದಾರೆ. ನಾನು ಹಳ್ಳಿಯಿಂದ ಬಂದವನು ನಾನೆ ಯಾಕೆ ಟಾರ್ಗೆಟ್ ಗೊತ್ತಿಲ್ಲ. ಅದ್ಯಾಕೆ ನನ್ನ ರಾಶಿಗೆ ಎಂಟ್ರಿ ಆಗಿದಾರೋ ಗೊತ್ತಿಲ್ಲ. ನಾನು ಚೆಸ್ ಪ್ಲೇಯರ್ ಟೈಮ್ ನೋಡಿ ಚಕ್ ಕೊಡುತ್ತೀನಿ ಎಂದು ತಿಳಿಸಿದರು.

ನಾನು ಯಾರಿಗೂ ಅರ್ಜಿ ಹಾಕೊಂಡು ಹೋಗಿಲ್ಲ. ನಾನು ಕಾಂಗ್ರೆಸ್ ಪಾರ್ಟಿಯವನು. ರೇವಣ್ಣ ಅವರಿಗೂ ನನಗೂ ಹೋಲಿಕೆ ಮಾಡಬೇಡಿ. ನನಗೆ ರೇವಣ್ಣ ಸಹವಾಸ ಬೇಡವೇ ಬೇಡ. ರೇವಣ್ಣ ಬೇಕಾದರೆ ಎಲ್ಲಾ ಖಾತೆ ಇಟ್ಟುಕೊಳ್ಳಲಿ ಮುಖ್ಯಮಂತ್ರಿ ಆಗಲಿ ನನಗೇನು? ಅವರ ಪಾರ್ಟಿ ಬೇರೆ. ನಮ್ಮ ಪಾರ್ಟಿ ಬೇರೆ. ಇಬ್ಬರು ಒಟ್ಟಿಗೆ ಸೇರಿ ಸರ್ಕಾರ ರಚನೆ ಮಾಡಿದ್ದೇವೆ. ಇಬ್ಬರು ಒಟ್ಟಿಗೆ ಕೆಲಸ ಮಾಡುತ್ತೇವೆ. ಕಾಂಗ್ರೆಸ್ ಪಕ್ಷಕ್ಕೆ ನಾನು ಬೇಕಾದರೆ ಉಳಿಸಿ ಕೊಳ್ಳುತ್ತಾರೆ. ಎಲ್ಲದಕ್ಕೂ ಸಮಯ ಬರಬೇಕು ಕಾಲ ಕೂಡಿ ಬರಬೇಕು ಎಂದು ಶಿವಕುಮಾರ್ ಹೇಳಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

3 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

3 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

4 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago