ಬೆಂಗಳೂರು : ಜನವರಿ 28ರಂದು ನನ್ನ ಜನ್ಮ ದಿನ. ಇಂತಹ ಜನ್ಮ ದಿನವನ್ನು ಕೊರೋನಾ ಸೋಂಕಿನ ಮುನ್ನೆಚ್ಚರಿಕಾ ಕ್ರಮವಾಗಿ ಆಚರಿಸಿಕೊಳ್ಳಲು ನಿರ್ಧರಿಸಿದ್ದೇನೆ. ಯಾವುದೇ ಕಾರ್ಯಕರ್ತರು ಫ್ಲೆಕ್, ಬ್ಯಾನರ್, ಹೋರ್ಡಿಂಗ್ಸ್ ಹಾಕಬೇಡಿ. ನಾನು ಅಂದು ಇಲಾಖೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿರುತ್ತೇನೆ. ಯಾರೂ ಶುಭಾಶಯ ತಿಳಿಸಲು ಬರಬೇಡಿ ಎಂಬುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವ ಅವರು ದಿನಾಂಕ 28-01-2021, ಗುರುವಾರದಂದು ನನ್ನ ಜನ್ಮದಿನವಿದ್ದು, ಈ ಮೂಲಕ ವಿನಂತಿಸುವುದೇನೆಂದರೆ ನನ್ನ ಜನ್ಮದಿನದಂದು ಯಾರೂ ಕೂಡ ಫ್ಲೆಕ್ಸ್ ಬ್ಯಾನರ್ಸ್, ಹೋರ್ಡಿಂಗ್ಸ್ ಹಾಕಬೇಡಿ. ಕೋವಿಡ್ ಮುನ್ನೆಚ್ಚರಿಕೆ ಹಿನ್ನಲೆಯಲ್ಲಿ ಉಡುಗೋರೆ, ಶಾಲು, ಮಾಲೆ, ಹೂಗುಚ್ಚಗಳೊಂದಿಗೆ ಶಿಭಾಶಯ ಕೋರಲು ಆಗಮಿಸಬಾರದೆಂದು ಮನವಿ ಮಾಡಿಕೊಳ್ಳುತ್ತೇನೆ.
ಅಲ್ಲದೇ ಆ ದಿನದಂದು ನಾನು ಇಲಾಖೆಗಳ ಕಾರ್ಯಕ್ರಮಗಳ ನಿಮಿತ್ಯ ಪ್ರವಾಸದಲ್ಲಿರುತ್ತೇನೆ. ಈ ಸಂಬಂಧ ಯಾವುದೇ ಚಟುವಟಿಕೆಗಳಿಗೆ ದುಂದು ವೆಚ್ಚ ಮಾಡದೇ, ಅದೇ ಹಣದಿಂದ ಕೊರೋನಾ ಸಂಕಷ್ಟಕ್ಕೆ ಸಿಲುಕಿರುವ ಬಡಜನರ ಸೇವೆಗೈಯಿರಿ ಎಂದು ನನ್ನ ಎಲ್ಲಾ ಕಾರ್ಯಕರ್ತರು, ಸ್ನೇಹಿತರು ಹಾಗೂ ಹಿತೈಷಿಗಳಲ್ಲಿ ಕಳಕಳಿಯ ಮನವಿ ಮಾಡಿಕೊಂಡಿದ್ದಾರೆ.
ರೈತರ ಹೋರಾಟ : ಸಾವು-ನೋವುಗಳು ಸಂಭವಿಸುತ್ತಿರುವುದು ನಿಜಕ್ಕೂ ದುಖದ ಸಂಗತಿ : ಸಚಿವ ಯು.ಟಿ.ಖಾದರ್ -Vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…