ಬಳ್ಳಾರಿ: ನನ್ನ ಜೀವನ ರಾಜ್ಯಕ್ಕೆ, ರಾಜಕಾರಣಕ್ಕೆ ಅರ್ಪಣೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧವೆಂದು ಬಿಜೆಪಿ ಶಾಸಕ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಶೀಘ್ರದಲ್ಲೆ ನಿರ್ಧಾರ ತೆಗೆದುಕೊಳ್ಳುತ್ತದೆ. ಡಿಸಿಎಂ ಸ್ಥಾನದ ವಿಚಾರವಾಗಿ, ನಾನು ಏನೂ ಮಾತನಾಡಲ್ಲ. ಹೈಕಮಾಂಡ್ ಏನು ಹೇಳುತ್ತದೋ ಅದಕ್ಕೆ ನಾನು ಬದ್ಧನಾಗಿರುತ್ತೇನೆ. ನಾನು ಯಾವ ಜಿಲ್ಲೆಗೂ, ಯಾವ ಕೋಟಕ್ಕೂ ಸೀಮಿತನಲ್ಲ. ನನ್ನ ಜೀವನ ರಾಜ್ಯಕ್ಕೆ, ರಾಜಕಾರಣಕ್ಕೆ ಅರ್ಪಣೆ ಎಂದು ತಮ್ಮ ನಡೆಯ ಬಗ್ಗೆ ಸ್ಪಷ್ಟಪಡಿಸಿದರು.
ಸಚಿವ ಸ್ಥಾನ ನೀಡುವುದು ಯಾವ ಜಿಲ್ಲೆಯ ಆಧಾರದ ಮೇಲೂ ಅಲ್ಲ. ನನ್ನಂತಹ ದೊಡ್ಡ ನಾಯಕರು, ಶಕ್ತಿವಂತ ನಾಯಕರು ಪಕ್ಷದಲ್ಲಿ ಬಹಳ ಜನರಿದ್ದಾರೆ. ನಮಗೆ ಹಾಗೂ ಕಾರ್ಯಕರ್ತರಿಗೆ ಬಿಎಸ್ ಯಡಿಯೂರಪ್ಪನವರು ಸಿಎಂ ಆಗಬೇಕು, ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂಬ ಕಳಕಳಿಯಿತ್ತು. ದೇವರ ಆಶಿರ್ವಾದದಿಂದ ಅದು ನೆರವೇರಿದೆ. ಹೀಗಾಗಿ ಪಕ್ಷ ಏನು ನಿರ್ಧಾರ ಮಾಡುತ್ತದೋ ಅದನ್ನು ನಾವು ಪಾಲಿಸುತ್ತೇವೆ. ಡಿಸಿಎಂ ಸ್ಥಾನ ನೀಡುವ ಬಗ್ಗೆ ಪಕ್ಷ ನಿರ್ಧಾರ ಮಾಡಬೇಕು ಎಂದು ತಿಳಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…