ಬಳ್ಳಾರಿ: ನನ್ನ ಜೀವನ ರಾಜ್ಯಕ್ಕೆ, ರಾಜಕಾರಣಕ್ಕೆ ಅರ್ಪಣೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧವೆಂದು ಬಿಜೆಪಿ ಶಾಸಕ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಶೀಘ್ರದಲ್ಲೆ ನಿರ್ಧಾರ ತೆಗೆದುಕೊಳ್ಳುತ್ತದೆ. ಡಿಸಿಎಂ ಸ್ಥಾನದ ವಿಚಾರವಾಗಿ, ನಾನು ಏನೂ ಮಾತನಾಡಲ್ಲ. ಹೈಕಮಾಂಡ್ ಏನು ಹೇಳುತ್ತದೋ ಅದಕ್ಕೆ ನಾನು ಬದ್ಧನಾಗಿರುತ್ತೇನೆ. ನಾನು ಯಾವ ಜಿಲ್ಲೆಗೂ, ಯಾವ ಕೋಟಕ್ಕೂ ಸೀಮಿತನಲ್ಲ. ನನ್ನ ಜೀವನ ರಾಜ್ಯಕ್ಕೆ, ರಾಜಕಾರಣಕ್ಕೆ ಅರ್ಪಣೆ ಎಂದು ತಮ್ಮ ನಡೆಯ ಬಗ್ಗೆ ಸ್ಪಷ್ಟಪಡಿಸಿದರು.
ಸಚಿವ ಸ್ಥಾನ ನೀಡುವುದು ಯಾವ ಜಿಲ್ಲೆಯ ಆಧಾರದ ಮೇಲೂ ಅಲ್ಲ. ನನ್ನಂತಹ ದೊಡ್ಡ ನಾಯಕರು, ಶಕ್ತಿವಂತ ನಾಯಕರು ಪಕ್ಷದಲ್ಲಿ ಬಹಳ ಜನರಿದ್ದಾರೆ. ನಮಗೆ ಹಾಗೂ ಕಾರ್ಯಕರ್ತರಿಗೆ ಬಿಎಸ್ ಯಡಿಯೂರಪ್ಪನವರು ಸಿಎಂ ಆಗಬೇಕು, ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂಬ ಕಳಕಳಿಯಿತ್ತು. ದೇವರ ಆಶಿರ್ವಾದದಿಂದ ಅದು ನೆರವೇರಿದೆ. ಹೀಗಾಗಿ ಪಕ್ಷ ಏನು ನಿರ್ಧಾರ ಮಾಡುತ್ತದೋ ಅದನ್ನು ನಾವು ಪಾಲಿಸುತ್ತೇವೆ. ಡಿಸಿಎಂ ಸ್ಥಾನ ನೀಡುವ ಬಗ್ಗೆ ಪಕ್ಷ ನಿರ್ಧಾರ ಮಾಡಬೇಕು ಎಂದು ತಿಳಿಸಿದರು.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…