ಬಳ್ಳಾರಿ: ನನ್ನ ಜೀವನ ರಾಜ್ಯಕ್ಕೆ, ರಾಜಕಾರಣಕ್ಕೆ ಅರ್ಪಣೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧವೆಂದು ಬಿಜೆಪಿ ಶಾಸಕ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಶೀಘ್ರದಲ್ಲೆ ನಿರ್ಧಾರ ತೆಗೆದುಕೊಳ್ಳುತ್ತದೆ. ಡಿಸಿಎಂ ಸ್ಥಾನದ ವಿಚಾರವಾಗಿ, ನಾನು ಏನೂ ಮಾತನಾಡಲ್ಲ. ಹೈಕಮಾಂಡ್ ಏನು ಹೇಳುತ್ತದೋ ಅದಕ್ಕೆ ನಾನು ಬದ್ಧನಾಗಿರುತ್ತೇನೆ. ನಾನು ಯಾವ ಜಿಲ್ಲೆಗೂ, ಯಾವ ಕೋಟಕ್ಕೂ ಸೀಮಿತನಲ್ಲ. ನನ್ನ ಜೀವನ ರಾಜ್ಯಕ್ಕೆ, ರಾಜಕಾರಣಕ್ಕೆ ಅರ್ಪಣೆ ಎಂದು ತಮ್ಮ ನಡೆಯ ಬಗ್ಗೆ ಸ್ಪಷ್ಟಪಡಿಸಿದರು.
ಸಚಿವ ಸ್ಥಾನ ನೀಡುವುದು ಯಾವ ಜಿಲ್ಲೆಯ ಆಧಾರದ ಮೇಲೂ ಅಲ್ಲ. ನನ್ನಂತಹ ದೊಡ್ಡ ನಾಯಕರು, ಶಕ್ತಿವಂತ ನಾಯಕರು ಪಕ್ಷದಲ್ಲಿ ಬಹಳ ಜನರಿದ್ದಾರೆ. ನಮಗೆ ಹಾಗೂ ಕಾರ್ಯಕರ್ತರಿಗೆ ಬಿಎಸ್ ಯಡಿಯೂರಪ್ಪನವರು ಸಿಎಂ ಆಗಬೇಕು, ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂಬ ಕಳಕಳಿಯಿತ್ತು. ದೇವರ ಆಶಿರ್ವಾದದಿಂದ ಅದು ನೆರವೇರಿದೆ. ಹೀಗಾಗಿ ಪಕ್ಷ ಏನು ನಿರ್ಧಾರ ಮಾಡುತ್ತದೋ ಅದನ್ನು ನಾವು ಪಾಲಿಸುತ್ತೇವೆ. ಡಿಸಿಎಂ ಸ್ಥಾನ ನೀಡುವ ಬಗ್ಗೆ ಪಕ್ಷ ನಿರ್ಧಾರ ಮಾಡಬೇಕು ಎಂದು ತಿಳಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…