Featured

ನನ್ನ ಜೀವನ ರಾಜ್ಯಕ್ಕೆ, ರಾಜಕಾರಣಕ್ಕೆ ಅರ್ಪಣೆ , ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ : ಶಾಸಕ ಶ್ರೀರಾಮುಲು -Vishwanews24

ಬಳ್ಳಾರಿ: ನನ್ನ ಜೀವನ ರಾಜ್ಯಕ್ಕೆ, ರಾಜಕಾರಣಕ್ಕೆ ಅರ್ಪಣೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧವೆಂದು ಬಿಜೆಪಿ ಶಾಸಕ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಶೀಘ್ರದಲ್ಲೆ ನಿರ್ಧಾರ ತೆಗೆದುಕೊಳ್ಳುತ್ತದೆ. ಡಿಸಿಎಂ ಸ್ಥಾನದ ವಿಚಾರವಾಗಿ, ನಾನು ಏನೂ ಮಾತನಾಡಲ್ಲ. ಹೈಕಮಾಂಡ್ ಏನು ಹೇಳುತ್ತದೋ ಅದಕ್ಕೆ ನಾನು ಬದ್ಧನಾಗಿರುತ್ತೇನೆ. ನಾನು ಯಾವ ಜಿಲ್ಲೆಗೂ, ಯಾವ ಕೋಟಕ್ಕೂ ಸೀಮಿತನಲ್ಲ. ನನ್ನ ಜೀವನ ರಾಜ್ಯಕ್ಕೆ, ರಾಜಕಾರಣಕ್ಕೆ ಅರ್ಪಣೆ ಎಂದು ತಮ್ಮ ನಡೆಯ ಬಗ್ಗೆ ಸ್ಪಷ್ಟಪಡಿಸಿದರು.

ಸಚಿವ ಸ್ಥಾನ ನೀಡುವುದು ಯಾವ ಜಿಲ್ಲೆಯ ಆಧಾರದ ಮೇಲೂ ಅಲ್ಲ. ನನ್ನಂತಹ ದೊಡ್ಡ ನಾಯಕರು, ಶಕ್ತಿವಂತ ನಾಯಕರು ಪಕ್ಷದಲ್ಲಿ ಬಹಳ ಜನರಿದ್ದಾರೆ. ನಮಗೆ ಹಾಗೂ ಕಾರ್ಯಕರ್ತರಿಗೆ ಬಿಎಸ್ ಯಡಿಯೂರಪ್ಪನವರು ಸಿಎಂ ಆಗಬೇಕು, ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂಬ ಕಳಕಳಿಯಿತ್ತು. ದೇವರ ಆಶಿರ್ವಾದದಿಂದ ಅದು ನೆರವೇರಿದೆ. ಹೀಗಾಗಿ ಪಕ್ಷ ಏನು ನಿರ್ಧಾರ ಮಾಡುತ್ತದೋ ಅದನ್ನು ನಾವು ಪಾಲಿಸುತ್ತೇವೆ. ಡಿಸಿಎಂ ಸ್ಥಾನ ನೀಡುವ ಬಗ್ಗೆ ಪಕ್ಷ ನಿರ್ಧಾರ ಮಾಡಬೇಕು ಎಂದು ತಿಳಿಸಿದರು.

 

 

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

17 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

17 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

18 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

18 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

18 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

18 hours ago