ಬಳ್ಳಾರಿ: ನನ್ನ ಜೀವನ ರಾಜ್ಯಕ್ಕೆ, ರಾಜಕಾರಣಕ್ಕೆ ಅರ್ಪಣೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧವೆಂದು ಬಿಜೆಪಿ ಶಾಸಕ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಶೀಘ್ರದಲ್ಲೆ ನಿರ್ಧಾರ ತೆಗೆದುಕೊಳ್ಳುತ್ತದೆ. ಡಿಸಿಎಂ ಸ್ಥಾನದ ವಿಚಾರವಾಗಿ, ನಾನು ಏನೂ ಮಾತನಾಡಲ್ಲ. ಹೈಕಮಾಂಡ್ ಏನು ಹೇಳುತ್ತದೋ ಅದಕ್ಕೆ ನಾನು ಬದ್ಧನಾಗಿರುತ್ತೇನೆ. ನಾನು ಯಾವ ಜಿಲ್ಲೆಗೂ, ಯಾವ ಕೋಟಕ್ಕೂ ಸೀಮಿತನಲ್ಲ. ನನ್ನ ಜೀವನ ರಾಜ್ಯಕ್ಕೆ, ರಾಜಕಾರಣಕ್ಕೆ ಅರ್ಪಣೆ ಎಂದು ತಮ್ಮ ನಡೆಯ ಬಗ್ಗೆ ಸ್ಪಷ್ಟಪಡಿಸಿದರು.
ಸಚಿವ ಸ್ಥಾನ ನೀಡುವುದು ಯಾವ ಜಿಲ್ಲೆಯ ಆಧಾರದ ಮೇಲೂ ಅಲ್ಲ. ನನ್ನಂತಹ ದೊಡ್ಡ ನಾಯಕರು, ಶಕ್ತಿವಂತ ನಾಯಕರು ಪಕ್ಷದಲ್ಲಿ ಬಹಳ ಜನರಿದ್ದಾರೆ. ನಮಗೆ ಹಾಗೂ ಕಾರ್ಯಕರ್ತರಿಗೆ ಬಿಎಸ್ ಯಡಿಯೂರಪ್ಪನವರು ಸಿಎಂ ಆಗಬೇಕು, ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂಬ ಕಳಕಳಿಯಿತ್ತು. ದೇವರ ಆಶಿರ್ವಾದದಿಂದ ಅದು ನೆರವೇರಿದೆ. ಹೀಗಾಗಿ ಪಕ್ಷ ಏನು ನಿರ್ಧಾರ ಮಾಡುತ್ತದೋ ಅದನ್ನು ನಾವು ಪಾಲಿಸುತ್ತೇವೆ. ಡಿಸಿಎಂ ಸ್ಥಾನ ನೀಡುವ ಬಗ್ಗೆ ಪಕ್ಷ ನಿರ್ಧಾರ ಮಾಡಬೇಕು ಎಂದು ತಿಳಿಸಿದರು.
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …