Featured

ನನ್ನ ಜೀವಿತಾವಧಿಯಲ್ಲಿ ಈ ದಿನವನ್ನು ನೋಡಲು ನಾನು ಕಾಯುತ್ತಿದ್ದೆ , ಪ್ರಧಾನ ಮಂತ್ರಿಯವರೇ ನಿಮಗೆ ಧನ್ಯವಾದಗಳು : ಸುಷ್ಮಾ ಸ್ವರಾಜ್ ಕೊನೆಯ ಟ್ವೀಟ್ -Vishwanews24

ನವದೆಹಲಿ: ಮಾಜಿ ವಿದೇಶಾಂಗ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್  ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
”ಪ್ರಧಾನ ಮಂತ್ರಿಯವರೇ ನಿಮಗೆ ತುಂಬು ಧನ್ಯವಾದಗಳು, ನನ್ನ ಜೀವಿತಾವಧಿಯಲ್ಲಿ ಈ ದಿನವನ್ನು ನೋಡಲು ನಾನು ಕಾಯುತ್ತಿದ್ದೆ” ಅವರು ನಿಧನಕ್ಕೂ ಮುನ್ನ ನಿನ್ನೆ ಸಾಯಂಕಾಲ 7.23ಕ್ಕೆ ಒಂದು ಟ್ವೀಟ್  ಮಾಡಿದ್ದರು. ಆ ಟ್ವೀಟ್ ಅನೇಕರಿಗೆ ಖುಷಿ ಕೊಟ್ಟಿದ್ದು ಮಾತ್ರವಲ್ಲದೆ ಕಣ್ಣಲ್ಲಿ ನೀರು ತರಿಸಿದ್ದು ಸುಳ್ಳಲ್ಲ.
ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನದ ಸಂವಿಧಾನ ವಿಧಿ 370ನ್ನು ಕೇಂದ್ರ ಸರ್ಕಾರ ರದ್ದುಪಡಿಸಿದ್ದಕ್ಕಾಗಿ ಅವರು ತೀವ್ರ ಹರ್ಷಗೊಂಡಿದ್ದರು. ದೇಶಕ್ಕೆ ಸಂಬಂಧಪಟ್ಟ ವಿಚಾರವಿರಲಿ, ರಾಜಕೀಯ ವಿಚಾರವಿರಲಿ ಅವರು ಭಾರತೀಯ ಜನತಾ ಪಕ್ಷದಲ್ಲಿ ಅಗ್ರಪಂಕ್ತಿಯ ನಾಯಕರ ಜೊತೆಯಲ್ಲಿಯೇ ತಮ್ಮ ಜೀವಿತಾವಧಿಯಲ್ಲಿ ಹೋರಾಡಿದವರು. ಜಮ್ಮು-ಕಾಶ್ಮೀರ ಸಮಸ್ಯೆ ವಿಚಾರದಲ್ಲಿ ಕೂಡ ಅವರು ಹೋರಾಟ ಮಾಡಿಕೊಂಡು ಬಂದಿದ್ದರು.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

8 minutes ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

17 minutes ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

32 minutes ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

46 minutes ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

4 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

4 hours ago