ಮಂಡ್ಯ: ನನ್ನ ಟೀಕೆ ಮಾಡುವವರಿಗೆ ಯೋಗ್ಯತೆ ಇದೆಯಾ ? ಕೆ.ಆರ್.ಪೇಟೆ ತಾಲೂಕಿನ 22 ಸಾವಿರ ರೈತ ಕುಟುಂಬದ ಸಾಲಮನ್ನಾ ಆಗಿದೆ. ಇತಿಹಾಸದಲ್ಲಿ ಯಾರೂ ನನ್ನ ಹಾಗೆ ಸಾಲಮನ್ನಾ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಅಗ್ರಹಾರಬಾಚಹಳ್ಳಿ ಗ್ರಾಮದಲ್ಲಿ ನಿನ್ನೆ ವಿಧಿವಶರಾದ ಕೆ.ಆರ್. ಪೇಟೆ ತಾಲೂಕು ಜೆಡಿಎಸ್ ಅಧ್ಯಕ್ಷ ವೆಂಕಟ ಸುಬ್ಬೆಗೌಡರ ಅಂತಿಮ ದರ್ಶನ ಪಡೆದ ನಂತರ ಮಾತನಾಡಿದ ಅವರು, ಇತಿಹಾಸದಲ್ಲಿ ಯಾರು ಕೂಡಾ ನನ್ನ ಹಾಗೆ ಸಾಲಮನ್ನಾ ಮಾಡಿಲ್ಲ. ಸಿದ್ದರಾಮಯ್ಯ ಮಾಡಿದ ಸಾಲಮನ್ನಾ ಚೆನ್ನಾಗಿದೆಯಂತೆ, ನನ್ನದು ಸರಿ ಇಲ್ಲವಂತೆ. ನಾನು 14 ತಿಂಗಳು ಮಾಡಿದ ಕಾರ್ಯಕ್ರಮದ ಬಗ್ಗೆ ಪುಸ್ತಕ ಬಿಡುಗಡೆ ಮಾಡುತ್ತೇನೆ. ಮಂಡ್ಯ ಜನ ಸ್ವಾಭಿಮಾನ ಉಳಿಸಿದರು ಅಂತ ಸಿದ್ದರಾಮಯ್ಯ ಹೇಳುತ್ತಾರೆ. ಮಂಡ್ಯ ಜಿಲ್ಲೆಯ ರೈತರ ಕಬ್ಬು ಖರೀದಿ ಮಾಡುವವರು ಯಾರೂ ಇಲ್ಲ. ಅದರ ಬಗ್ಗೆ ಸಿದ್ದುಗೆ ಚಿಂತೆ ಇಲ್ಲ ಎಂದು ಟೀಕಿಸಿದರು.
ಮಂಡ್ಯ ಜಿಲ್ಲೆಯ ರೈತರ ಬಗ್ಗೆ ಕಾಳಜಿ ಇದ್ದರೆ, ಕಟಾವಿಗೆ ಬಂದಿರುವ ಕಬ್ಬು ಮಾರಾಟ ಮಾಡಿಸಿ. ಸಿದ್ದರಾಮಯ್ಯಗೆ ನಾನೇನು ವಿಶ್ವಾಸ ದ್ರೋಹ ಮಾಡಿಲ್ಲ. ಅದನ್ನು ಜನ ತೀರ್ಮಾನ ಮಾಡುತ್ತಾರೆ” ಎಂದು ಸಿದ್ದರಾಮಯ್ಯಗೆ, ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…