ಮಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಇಬ್ಬರು ಅಭ್ಯರ್ಥಿಗಳು ಕಣದಲ್ಲಿದ್ದರು. ಇಬ್ಬರೂ ಜಯಶಾಲಿಯಾಗಿದ್ದಾರೆ. ಚುನಾವಣೆ ವೇಳೆ ಅಡ್ಡ ಮತದಾನ ನಡೆದಿದೆ. ಇದರಿಂದ ನಾನು ಸೇರಿದಂತೆ ಲಕ್ಷಾಂತರ ಕಾರ್ಯಕರ್ತರು ಬಹಳ ನೋವನ್ನು ಅನುಭವಿಸುವಂತಾಗಿದೆ. ಬಿಜೆಪಿ ಶಾಸಕರಿಂದ ಅಡ್ಡ ಮತದಾನವು ಬೇರೆ ಬೇರೆ ಚರ್ಚೆಗೆ ಕಾರಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ಲೇಷಿಸಿದ್ದಾರೆ.
ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.
ಇದನ್ನೂ ಓದಿ :
ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ಆಗಬೇಕೆಂದು ಹೇಳಿದ್ದು ನಿಜ ಎಂದ ಅವರು, ಪಕ್ಷದ ಹಿರಿಯ ನಾಯಕರ ಅಭಿಪ್ರಾಯ- ಕಿವಿಮಾತಿನನ್ವಯ ಅವರೆಲ್ಲರ ಮಾತಿಗೆ ಗೌರವ ಕೊಟ್ಟು ಕ್ಷೇತ್ರದ ಭಕ್ತನಾಗಿ ಪ್ರಾರ್ಥನೆ ಸಲ್ಲಿಸಲು ಬಂದಿರುವುದಾಗಿ ತಿಳಿಸಿದರು.
ಸಾಕಷ್ಟು ಅಪಪ್ರಚಾರ ನಡೆದಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಎಲ್ಲೋ ಒಂದು ಕಡೆ ನಾನೇ ಅಡ್ಡ ಮತದಾನಕ್ಕೆ ಅವಕಾಶ ಮಾಡಿಕೊಟ್ಟಿದ್ದೇನೆ ಎಂಬ ಆರೋಪಗಳೂ ಸಾಮಾಜಿಕ ಜಾಲತಾಣ, ಪತ್ರಿಕಾ ಮಾಧ್ಯಮದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಚರ್ಚೆಗೆ ಕಾರಣವಾದುದು ನಮ್ಮವರೇ ಎಂಬ ಅರಿವು ನನಗಿದೆ ಎಂದರು.
ಇದನ್ನೂ ಓದಿ :
ಪ್ರಧಾನಿ ಮೋದಿ, ಪಕ್ಷದ ಹಿಂದಿನ ಅಧ್ಯಕ್ಷ ಅಮಿತ್ ಶಾ ಮತ್ತು ಪಕ್ಷದ ಹಿರಿಯರ ಆಶೀರ್ವಾದದಿಂದ ಕೆಲಸ ಮಾಡುತ್ತಿದ್ದೇನೆ. ರಾಜ್ಯಾಧ್ಯಕ್ಷನಾಗಿ ಇಂಥ ಕೀಳು ಮಟ್ಟದ ಕೆಲಸ ಮಾಡುವ ಪ್ರಶ್ನೆಯೇ ಉದ್ಭವವಾಗದು. ವಿಜಯೇಂದ್ರ- ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧವೂ ಇಲ್ಲ. ಯಾವುದೇ ಆತ್ಮೀಯತೆಯೂ ನಮ್ಮ ಮಧ್ಯೆ ಇಲ್ಲ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷರಿಗೆ ಕೊಡಬೇಕಾದ ಗೌರವವನ್ನು ಕೊಟ್ಟಿದ್ದೇನೆ. ಒಬ್ಬ ಶಾಸಕನಾಗಿ ರಾಜ್ಯದ ಮುಖ್ಯಮಂತ್ರಿಗೆ ಕೊಡಬೇಕಾದ ಗೌರವವನ್ನು ಕೊಡಬೇಕಾಗುತ್ತದೆ ಎಂದು ತಿಳಿಸಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…