Featured

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ

ಮಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಇಬ್ಬರು ಅಭ್ಯರ್ಥಿಗಳು ಕಣದಲ್ಲಿದ್ದರು. ಇಬ್ಬರೂ ಜಯಶಾಲಿಯಾಗಿದ್ದಾರೆ. ಚುನಾವಣೆ ವೇಳೆ ಅಡ್ಡ ಮತದಾನ ನಡೆದಿದೆ. ಇದರಿಂದ ನಾನು ಸೇರಿದಂತೆ ಲಕ್ಷಾಂತರ ಕಾರ್ಯಕರ್ತರು ಬಹಳ ನೋವನ್ನು ಅನುಭವಿಸುವಂತಾಗಿದೆ. ಬಿಜೆಪಿ ಶಾಸಕರಿಂದ ಅಡ್ಡ ಮತದಾನವು ಬೇರೆ ಬೇರೆ ಚರ್ಚೆಗೆ ಕಾರಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ಲೇಷಿಸಿದ್ದಾರೆ.

ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ಇದನ್ನೂ ಓದಿ :

ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ಆಗಬೇಕೆಂದು ಹೇಳಿದ್ದು ನಿಜ ಎಂದ ಅವರು, ಪಕ್ಷದ ಹಿರಿಯ ನಾಯಕರ ಅಭಿಪ್ರಾಯ- ಕಿವಿಮಾತಿನನ್ವಯ ಅವರೆಲ್ಲರ ಮಾತಿಗೆ ಗೌರವ ಕೊಟ್ಟು ಕ್ಷೇತ್ರದ ಭಕ್ತನಾಗಿ ಪ್ರಾರ್ಥನೆ ಸಲ್ಲಿಸಲು ಬಂದಿರುವುದಾಗಿ ತಿಳಿಸಿದರು.

ಸಾಕಷ್ಟು ಅಪಪ್ರಚಾರ ನಡೆದಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಎಲ್ಲೋ ಒಂದು ಕಡೆ ನಾನೇ ಅಡ್ಡ ಮತದಾನಕ್ಕೆ ಅವಕಾಶ ಮಾಡಿಕೊಟ್ಟಿದ್ದೇನೆ ಎಂಬ ಆರೋಪಗಳೂ ಸಾಮಾಜಿಕ ಜಾಲತಾಣ, ಪತ್ರಿಕಾ ಮಾಧ್ಯಮದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಚರ್ಚೆಗೆ ಕಾರಣವಾದುದು ನಮ್ಮವರೇ ಎಂಬ ಅರಿವು ನನಗಿದೆ ಎಂದರು.

ಇದನ್ನೂ ಓದಿ :

ಪ್ರಧಾನಿ ಮೋದಿ, ಪಕ್ಷದ ಹಿಂದಿನ ಅಧ್ಯಕ್ಷ ಅಮಿತ್ ಶಾ ಮತ್ತು ಪಕ್ಷದ ಹಿರಿಯರ ಆಶೀರ್ವಾದದಿಂದ ಕೆಲಸ ಮಾಡುತ್ತಿದ್ದೇನೆ. ರಾಜ್ಯಾಧ್ಯಕ್ಷನಾಗಿ ಇಂಥ ಕೀಳು ಮಟ್ಟದ ಕೆಲಸ ಮಾಡುವ ಪ್ರಶ್ನೆಯೇ ಉದ್ಭವವಾಗದು. ವಿಜಯೇಂದ್ರ- ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧವೂ ಇಲ್ಲ. ಯಾವುದೇ ಆತ್ಮೀಯತೆಯೂ ನಮ್ಮ ಮಧ್ಯೆ ಇಲ್ಲ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷರಿಗೆ ಕೊಡಬೇಕಾದ ಗೌರವವನ್ನು ಕೊಟ್ಟಿದ್ದೇನೆ. ಒಬ್ಬ ಶಾಸಕನಾಗಿ ರಾಜ್ಯದ ಮುಖ್ಯಮಂತ್ರಿಗೆ ಕೊಡಬೇಕಾದ ಗೌರವವನ್ನು ಕೊಡಬೇಕಾಗುತ್ತದೆ ಎಂದು ತಿಳಿಸಿದರು.

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

8 minutes ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

18 minutes ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

27 minutes ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

42 minutes ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

1 hour ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ – vishwanews24

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…

1 hour ago