ಚೆನ್ನೈ: 2024ರ ಲೋಕಸಭೆ ಚುನಾವಣೆಯಲ್ಲಿ ಸಾಕಷ್ಟು ನಿರೀಕ್ಷೆಗಳೊಂದಿಗೆ ತಮಿಳುನಾಡಿನಲ್ಲಿ ಸ್ಫರ್ಧಿಸಿದ್ದ ಅಣ್ಣಾಮಲೈ ನೇತೃತ್ವದ ಬಿಜೆಪಿಗೆ ತೀವ್ರ ನಿರಾಸೆಯಾಗಿದ್ದು ಸಮೀಕ್ಷೆಗಳ ಪ್ರಕಾರ 1ರಿಂದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬಹುದು ಎಂದು ಹೇಳಲಾಗಿತ್ತು.
ಆದರೆ ಸಮೀಕ್ಷೆಗಳು ಹುಸಿಯಾಗಿದ್ದು ಕಾಂಗ್ರೆಸ್ ನೇತೃತ್ವದ INDIA ಮೈತ್ರಿಕೂಟ ಎಲ್ಲಾ ಕ್ಷೇತ್ರಗಳಲ್ಲಿ ಗೆದ್ದು ಬೀಗಿದೆ. ಇನ್ನು ಕೊಯಂಬತ್ತೂರಿನಿಂದ ಸ್ಪರ್ಧಿಸಿದ ಅಣ್ಣಾಮಲೈ 1.18 ಲಕ್ಷ ಮತಗಳ ಅಂತರದಿಂದ ಸೋಲು ಅನುಭವಿಸಿದ್ದರು. ಇದೇ ವಿಷಯವಾಗಿ ಡಿಎಂಕೆ ನಾಯಕಿ, ಮಾಜಿ ಸಿಎಂ ಕರುಣಾನಿಧಿ ಪುತ್ರಿ ಕನ್ನಿಮೋಳಿ, ಗೆದ್ದೆ ಗೆಲ್ಲುತ್ತೇವೆ ಎಂದು ಅತಿಯಾದ ಆತ್ಮವಿಶ್ವಾಸ ಇಟ್ಟುಕೊಂಡಿದ್ದ ಅಣ್ಣಾಮಲೈ ಸೋಲಾಗಿದೆ ಎಂದು ಗೇಲಿ ಮಾಡಿದ್ದರು. ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ್ದ ನೀಡಿದ ಅಣ್ಣಾಮಲೈ, ನನ್ನ ತಂದೆ ಕರುಣಾನಿದಿಯಾಗಿದ್ದರೆ ನಾನು ಸುಲಭದಲ್ಲಿ ಗೆಲ್ಲುತ್ತಿದ್ದೆ. ಆದರೆ ನನ್ನ ತಂದೆ ಕುಪ್ಪುಸ್ವಾಮಿ ಹೀಗಾಗಿ ಗೆಲ್ಲೋದಕ್ಕೆ ಸ್ವಲ್ಪ ಸಮಯ ಬೇಕು ಎಂದು ಹೇಳಿದ್ದಾರೆ.
ಇದೇ ವೇಳೆ, ಲೋಕಸಭೆ ಚುನಾವಣೆಯಲ್ಲಿ ನಮ್ಮ ಮತ ಪ್ರಮಾಣ ಹೆಚ್ಚಾಗಿದ್ದು ಶೇಕಡ 11ಕ್ಕೆ ಬಂದು ತಲುಪಿದ್ದೇವೆ. ಮುಂಬರುವ ವರ್ಷಗಳಲ್ಲಿ ಪಕ್ಷದ ಮತಗಳಿಕೆ ಮತ್ತಷ್ಟು ಹೆಚ್ಚಾಗಲಿದೆ. ಈ ಬಾರಿ 12 ಸ್ಥಾನಗಳಲ್ಲಿ ಬಿಜೆಪಿ ಎರಡನೇ ಸ್ಥಾನ ಗಳಿಸಿದೆ. 2014ಕ್ಕೆ ಹೋಲಿಸಿದರೆ ಬಿಜೆಪಿ ತನ್ನ ಮತಗಳನ್ನು ದ್ವಿಗುಣಗೊಳಿಸಿದೆ. ನಮ್ಮ ಕಾರ್ಯಕರ್ತರು ಗ್ರೌಂಡ್ ಲೆವೆಲ್ ನಲ್ಲಿ ಕೆಲಸ ಮಾಡಿದ್ದು ಪಕ್ಷ ಗಟ್ಟಿಯಾಗುತ್ತಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪುಟಿದೇಳಲಿದೆ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…