Featured

ನನ್ನ ತಂದೆ ಕರುಣಾನಿಧಿಯಾಗಿದ್ದರೆ ನಾನು ಸುಲಭದಲ್ಲಿ ಗೆಲ್ಲುತ್ತಿದ್ದೆ : ಅಣ್ಣಾಮಲೈ ತಿರುಗೇಟು – vishwanews24

ನನ್ನ ತಂದೆ ಕುಪ್ಪುಸ್ವಾಮಿ ಹೀಗಾಗಿ ಗೆಲ್ಲೋದಕ್ಕೆ ಸ್ವಲ್ಪ ಸಮಯ ಬೇಕು : ಅಣ್ಣಾಮಲೈ ತಿರುಗೇಟು

ಚೆನ್ನೈ: 2024ರ ಲೋಕಸಭೆ ಚುನಾವಣೆಯಲ್ಲಿ ಸಾಕಷ್ಟು ನಿರೀಕ್ಷೆಗಳೊಂದಿಗೆ ತಮಿಳುನಾಡಿನಲ್ಲಿ ಸ್ಫರ್ಧಿಸಿದ್ದ ಅಣ್ಣಾಮಲೈ ನೇತೃತ್ವದ ಬಿಜೆಪಿಗೆ ತೀವ್ರ ನಿರಾಸೆಯಾಗಿದ್ದು ಸಮೀಕ್ಷೆಗಳ ಪ್ರಕಾರ 1ರಿಂದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬಹುದು ಎಂದು ಹೇಳಲಾಗಿತ್ತು.

ಆದರೆ ಸಮೀಕ್ಷೆಗಳು ಹುಸಿಯಾಗಿದ್ದು ಕಾಂಗ್ರೆಸ್ ನೇತೃತ್ವದ INDIA ಮೈತ್ರಿಕೂಟ ಎಲ್ಲಾ ಕ್ಷೇತ್ರಗಳಲ್ಲಿ ಗೆದ್ದು ಬೀಗಿದೆ. ಇನ್ನು ಕೊಯಂಬತ್ತೂರಿನಿಂದ ಸ್ಪರ್ಧಿಸಿದ ಅಣ್ಣಾಮಲೈ 1.18 ಲಕ್ಷ ಮತಗಳ ಅಂತರದಿಂದ ಸೋಲು ಅನುಭವಿಸಿದ್ದರು. ಇದೇ ವಿಷಯವಾಗಿ ಡಿಎಂಕೆ ನಾಯಕಿ, ಮಾಜಿ ಸಿಎಂ ಕರುಣಾನಿಧಿ ಪುತ್ರಿ ಕನ್ನಿಮೋಳಿ, ಗೆದ್ದೆ ಗೆಲ್ಲುತ್ತೇವೆ ಎಂದು ಅತಿಯಾದ ಆತ್ಮವಿಶ್ವಾಸ ಇಟ್ಟುಕೊಂಡಿದ್ದ ಅಣ್ಣಾಮಲೈ ಸೋಲಾಗಿದೆ ಎಂದು ಗೇಲಿ ಮಾಡಿದ್ದರು. ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ್ದ ನೀಡಿದ ಅಣ್ಣಾಮಲೈ, ನನ್ನ ತಂದೆ ಕರುಣಾನಿದಿಯಾಗಿದ್ದರೆ ನಾನು ಸುಲಭದಲ್ಲಿ ಗೆಲ್ಲುತ್ತಿದ್ದೆ. ಆದರೆ ನನ್ನ ತಂದೆ ಕುಪ್ಪುಸ್ವಾಮಿ ಹೀಗಾಗಿ ಗೆಲ್ಲೋದಕ್ಕೆ ಸ್ವಲ್ಪ ಸಮಯ ಬೇಕು ಎಂದು ಹೇಳಿದ್ದಾರೆ.

ಇದೇ ವೇಳೆ, ಲೋಕಸಭೆ ಚುನಾವಣೆಯಲ್ಲಿ ನಮ್ಮ ಮತ ಪ್ರಮಾಣ ಹೆಚ್ಚಾಗಿದ್ದು ಶೇಕಡ 11ಕ್ಕೆ ಬಂದು ತಲುಪಿದ್ದೇವೆ. ಮುಂಬರುವ ವರ್ಷಗಳಲ್ಲಿ ಪಕ್ಷದ ಮತಗಳಿಕೆ ಮತ್ತಷ್ಟು ಹೆಚ್ಚಾಗಲಿದೆ. ಈ ಬಾರಿ 12 ಸ್ಥಾನಗಳಲ್ಲಿ ಬಿಜೆಪಿ ಎರಡನೇ ಸ್ಥಾನ ಗಳಿಸಿದೆ. 2014ಕ್ಕೆ ಹೋಲಿಸಿದರೆ ಬಿಜೆಪಿ ತನ್ನ ಮತಗಳನ್ನು ದ್ವಿಗುಣಗೊಳಿಸಿದೆ. ನಮ್ಮ ಕಾರ್ಯಕರ್ತರು ಗ್ರೌಂಡ್ ಲೆವೆಲ್ ನಲ್ಲಿ ಕೆಲಸ ಮಾಡಿದ್ದು ಪಕ್ಷ ಗಟ್ಟಿಯಾಗುತ್ತಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪುಟಿದೇಳಲಿದೆ ಎಂದರು.

Vishwa News 24

Recent Posts

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

10 minutes ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

33 minutes ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

39 minutes ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

1 hour ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

2 hours ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

2 hours ago