Featured

ನನ್ನ ಧರ್ಮಕ್ಕಾಗಿ ಕೇಸರಿ ಶಾಲು ಧರಿಸಿದ್ದೇನೆ : ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ – vishwanews24

ಬಿಜೆಪಿಗೆ ಹೋಗ್ತಿನೊ, ಕಾಂಗ್ರೆಸ್ಸಿನಲ್ಲೇ ಉಳಿತಿನೋ ಎಂಬುದಕ್ಕೆ 3 ವರ್ಷ ಕಾಯೋಣ: ಶಾಸಕಿ ನಯನಾ ಮೋಟಮ್ಮ

ಚಿಕ್ಕಮಗಳೂರು: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಜೊತೆ ಕಾಂಗ್ರೆಸ್‌ ಶಾಸಕಿ ನಯನಾ ಮೋಟಮ್ಮ ಸರಿ ಶಾಲು ಧರಿಸಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರುವುದು ಹಲವರ ಹುಬ್ಬೇರುವಂತೆ ಮಾಡಿದೆ.

ಹಿಂದೂವಾಗಿ, ದಲಿತೆಯಾಗಿ ಮೂಡಿಗೆರೆಯಲ್ಲಿ ಜನಿಸಿದ್ದೇನೆ. ಮುಂದೆ ಬಿಜೆಪಿಗೆ ಹೋಗ್ತಿನೊ, ಕಾಂಗ್ರೆಸ್ಸಿನಲ್ಲೇ ಉಳಿತಿನೋ, ಬಿಎಸ್‌ಪಿ ಅಥವಾ ಎಸ್‌ಡಿಪಿಐ ಸೇರುತ್ತೇನೋ ಎಂಬ ಪ್ರಶ್ನೆಗೆ ಮೂರು ವರ್ಷ ಕಾಯೋಣ ಎಂದು ನಯನಾ ಮೋಟಮ್ಮ ಹೇಳಿದರು.

ಮೂಡಿಗೆರೆಯಲ್ಲಿ ಹಿಂದೂ ಮಹಾಸಭಾ ಗಣಪತಿ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಅವರು, ಇಂದು ಕೇಸರಿ ಶಾಲು ಹಾಕಿ ಬಂದಿದ್ದೇನೆ. ಪಕ್ಷದ ಕಾರ್ಯಕರ್ತರೂ ಬಂದಿದ್ದಾರೆ. ಈ ಬಗ್ಗೆ ಹಲವರಿಗೆ ಪ್ರಶ್ನೆಗಳಿವೆ. ನದಿ ಎಂದರೆ ಕಾಂಗ್ರೆಸ್ಸಾ, ದಡ ಎಂದರೆ ಬಿಜೆಪಿಯಾ ಎಂಬ ಶಂಕೆ ಬೇಡ ಎಂದರು.

ಕೇಸರಿ ಶಾಲು ಹಾಕಿ ಬಂದಿದ್ದೇನೆ. ಪಕ್ಷದ ಕಾರ್ಯಕರ್ತರೂ ಬಂದಿದ್ದಾರೆ. ಈ ಬಗ್ಗೆ ಹಲವರಿಗೆ ಪ್ರಶ್ನೆಗಳಿವೆ. ನದಿ ಎಂದರೆ ಕಾಂಗ್ರೆಸ್ಸಾ, ದಡ ಎಂದರೆ ಬಿಜೆಪಿಯಾ ಎಂಬ ಶಂಕೆ ಬೇಡ.

ನಾನು ಗಣಪತಿಗಾಗಿ, ಧರ್ಮಕ್ಕಾಗಿ ಬಂದಿದ್ದೇನೆ. ಶಾಸಕಿಯಾಗಿ ಪಕ್ಷ ಪ್ರತಿನಿಧಿಸುವುದು ಆ ನಂತರ, ಈಗ ಗಣಪತಿ ಸಮಿತಿಯ ಕಾರ್ಯಾಧ್ಯಕ್ಷೆಯಾಗಿ ಇಲ್ಲಿಗೆ ಬಂದಿದ್ದೇನೆ. ಆದ್ದರಿಂದ ಯಾವ ಪಕ್ಷದವರಿಗೂ ಪ್ರಶ್ನೆಗಳು ಉಳಿಯಬಾರದು ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಶಾಸಕಿಯಾಗಿಯೂ ನಿಂತಿದ್ದೇನೆ. ಅದನ್ನು ಗುರುತಿಸಿಕೊಳ್ಳಲೇಬೇಕು. ಅದರ ಜೊತೆಗೆ ಸಾಕಷ್ಟು ಅಸ್ತಿತ್ವಗಳು ಇವೆ. ಅದನ್ನೆಲ್ಲಾ ಸೇರಿಸಿಕೊಂಡು ನಯನಾ ಮೋಟಮ್ಮ ಆಗಿದ್ದೇನೆ ಎಂದರು. ಯಾರೂ ಕೂಡ ಹುಟ್ಟುವಾಗಲೇ ಇಂತಹ ಜಾತಿ-ಧರ್ಮ, ಹೆಣ್ಣು-ಗಂಡು ಎಂದು ಹುಟ್ಟಿರುವುದಿಲ್ಲ ಎಂದರು.

Vishwa News 24

Recent Posts

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

2 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

2 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

3 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

3 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

3 hours ago

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago