ಕೋಲಾರ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರೇ ನೀವೇನು ಮಹಾನ್ ಹರಿಶ್ಚಂದ್ರರಾ, ಪಕ್ಷದ ಬಗ್ಗೆ, ನನ್ನ ಬಗ್ಗೆ ಲಘುವಾಗಿ ಮಾತನಾಡಿದರೆ ಹುಷಾರ್ ಎಂದು ಜೆಡಿಎಸ್ ನಾಯಕ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಜಿಲ್ಲೆಯ ಮೂರು ತಾಲೂಕುಗಳಲ್ಲಿ ದಿನಸಿ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಾತನಾಡಿದ ಅವರು, “ರಾಜಕೀಯ ಮಾಡುವುದನ್ನು ಸಿದ್ದರಾಮಯ್ಯ ಅವರಿಂದ ನಾನು ಕಲಿಯಬೇಕಿಲ್ಲ. 2008ರ ಚುನಾವಣೆಯಲ್ಲಿ ನೀವೇ ಯಡಿಯೂರಪ್ಪ ಅವರ ಬಳಿ ಹಣ ಪಡೆದಿದ್ದೀರಿ. ಇದೇ ನಿಮ್ಮ ಜಾಯಮಾನ, ಯಾವ ಸಂದರ್ಭದಲ್ಲಿ ಯಾರ ಕುತ್ತಿಗೆ ಕೊಯ್ದಿದ್ದೀರಿ ತಿಳಿದಿದೆ. ಬೆಂಗಳೂರು ನಗರದಲ್ಲಿ 400 ಎಕರೆ ರೀಡೋ ಮಾಡಿದಿರಿ, ಕೆಂಪಣ್ಣ ಆಯೋಗ ವರದಿ ಮಾಡಿದಿರಲ್ಲ ಏನಾಯ್ತು? ನನ್ನ ಪಕ್ಷವನ್ನು ದುಡ್ಡಿಗಾಗಿ ಅಡಮಾನ ಇಟ್ಟಿಲ್ಲ, ಜೆಡಿಎಸ್ ಹಣಕ್ಕಾಗಿ ಎಲ್ಲೂ ಅಡ ಇಟ್ಟಿಲ್ಲ, ಜನರ ಒಳಿತಿಗಾಗಿ ಇರುವ ಪಕ್ಷದ ಬಗ್ಗೆ ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು ಎಂದು ಗುಡುಗಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…