Featured

ನನ್ನ ಪತಿ ಪಾರ್ಸಿ, ಅವರ ದೇಗುಲಕ್ಕೆ ನನಗೆ ಪ್ರವೇಶವಿಲ್ಲ: ಸ್ಮೃತಿ ಇರಾನಿ -Vishwanews24

ನವದೆಹಲಿ: ಶಬರಿಮಲೆಯಲ್ಲಿ 50 ವರ್ಷದ ಒಳಗಿನ ಮಹಿಳೆಯರಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಿರುವ ಸುಪ್ರೀಂ ಕೋರ್ಟ್​ನ ತೀರ್ಪಿನಿಂದಾಗಿ ಕೇರಳದಲ್ಲಿ ಉಂಟಾಗಿರುವ ಘರ್ಷಣೆಯ ಕುರಿತು ಸ್ಮೃತಿ ಇರಾನಿ ಅವರು ತಡವಾಗಿ ಮಾತನಾಡಿದ್ದಾರೆ. ಈ ವೇಳೆ ಅವರು ತಮ್ಮದೇ ಅನುಭವವೊಂದನ್ನು ಉದಾಹರಣೆಯಾಗಿ ನೀಡಿದ್ದಾರೆ.

ಶುಕ್ರವಾರ ದೆಹಲಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಸ್ಮೃತಿ ಇರಾನಿ ಭಾಗವಹಿಸಿದ್ದರು. ಶಬರಿಮಲೆ ಪ್ರಕರಣದ ಕುರಿತು ಅವರು ಹಿಂದೊಮ್ಮೆ ನೀಡಿದ್ದ ” ಪ್ರಾರ್ಥಿಸುವ ಹಕ್ಕು ಎಂಬುದು ಅಪಹಾಸ್ಯ ಮಾಡುವ ಹಕ್ಕಲ್ಲ, ” ಎಂಬ ಹೇಳಿಕೆ ಕುರಿತು ವಿದ್ಯಾರ್ಥಿಗಳು ಪ್ರಶ್ನೆ ಮಾಡಿದರು. ಈ ವೇಳೆ ಮಾತನಾಡಿರುವ ಅವರು,

“ನಾನು ನನ್ನ ಅನುಭವದ ಮೂಲಕ ಮಾತನಾಡುತ್ತೇನೆ. ಇದನ್ನೇ ಅಂದು ಹೇಳಿದ್ದೆ. ನನ್ನ ಪತಿ ಝೊರಾಷ್ಟ್ರಿಯನ್​ (ಪಾರ್ಸಿ). ಅವರ ನೀತಿ ನಿಯಮಗಳ ಪ್ರಕಾರ ಅವರ ದೇಗುಲಕ್ಕೆ (ಅಗ್ನಿ ದೇಗುಲ) ನನಗೆ ಪ್ರವೇಶವಿಲ್ಲ. ಆ ನೀತಿ ನಿಯಮಗಳು ಸಂವಿಧಾನದ ಮೂಲಕ ಸ್ಥಾಪಿತವಾಗಿದ್ದಲ್ಲ. ಧಾರ್ಮಿಕ ಆಚರಣೆಗಳ ಮೂಲಕ ರಚನೆಯಾಗಿದ್ದು. ನಾನು ಇಷ್ಟು ದೊಡ್ಡ ಹುದ್ದೆಯಲ್ಲಿದ್ದರೂ ನನಗೆ ಅಗ್ನಿ ದೇಗುಲಕ್ಕೆ ಪ್ರವೇಶ ನೀಡಲಿಲ್ಲ. ಆದರೆ, ನಾನು ಇದರ ವಿರುದ್ಧ ನ್ಯಾಯಾಲಯದ ಮೆಟ್ಟಿಲು ಏರಲಿಲ್ಲ. ಅವರ ನಂಬಿಕೆಗಳನ್ನು ನಾನು ಗೌರವಿಸಿದೆ,” ಎಂದು ಅವರು ಹೇಳಿಕೊಂಡಿದ್ದಾರೆ.

“ಯಾವುದೇ ಧರ್ಮದ ಆಚರಣೆಗಳನ್ನು ನಾವು ಗೌರವಿಸಬೇಕು. ಅದನ್ನು ಉಲ್ಲಂಘಿಸುವವರು ಪತ್ರಿಕೆಗಳಲ್ಲಿ ಹೆಡ್​ಲೈನ್​ಗಳಾಗಲಷ್ಟೇ ಪ್ರಯತ್ನ ಮಾಡುತ್ತಿರುತ್ತಾರೆ. ಅಂಥ ಪ್ರಯತ್ನಗಳು ದೇಶದ ವೈವಿಧ್ಯತೆಗೆ ಮಾಡಿದ ಭಂಗ,” ಎಂದು ಸ್ಮೃತಿ ಅಭಿಪ್ರಾಯಪಟ್ಟಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

4 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

5 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

5 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

6 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

7 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

7 hours ago