Featured

ನನ್ನ ಪತಿ ಪಾರ್ಸಿ, ಅವರ ದೇಗುಲಕ್ಕೆ ನನಗೆ ಪ್ರವೇಶವಿಲ್ಲ: ಸ್ಮೃತಿ ಇರಾನಿ -Vishwanews24

ನವದೆಹಲಿ: ಶಬರಿಮಲೆಯಲ್ಲಿ 50 ವರ್ಷದ ಒಳಗಿನ ಮಹಿಳೆಯರಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಿರುವ ಸುಪ್ರೀಂ ಕೋರ್ಟ್​ನ ತೀರ್ಪಿನಿಂದಾಗಿ ಕೇರಳದಲ್ಲಿ ಉಂಟಾಗಿರುವ ಘರ್ಷಣೆಯ ಕುರಿತು ಸ್ಮೃತಿ ಇರಾನಿ ಅವರು ತಡವಾಗಿ ಮಾತನಾಡಿದ್ದಾರೆ. ಈ ವೇಳೆ ಅವರು ತಮ್ಮದೇ ಅನುಭವವೊಂದನ್ನು ಉದಾಹರಣೆಯಾಗಿ ನೀಡಿದ್ದಾರೆ.

ಶುಕ್ರವಾರ ದೆಹಲಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಸ್ಮೃತಿ ಇರಾನಿ ಭಾಗವಹಿಸಿದ್ದರು. ಶಬರಿಮಲೆ ಪ್ರಕರಣದ ಕುರಿತು ಅವರು ಹಿಂದೊಮ್ಮೆ ನೀಡಿದ್ದ ” ಪ್ರಾರ್ಥಿಸುವ ಹಕ್ಕು ಎಂಬುದು ಅಪಹಾಸ್ಯ ಮಾಡುವ ಹಕ್ಕಲ್ಲ, ” ಎಂಬ ಹೇಳಿಕೆ ಕುರಿತು ವಿದ್ಯಾರ್ಥಿಗಳು ಪ್ರಶ್ನೆ ಮಾಡಿದರು. ಈ ವೇಳೆ ಮಾತನಾಡಿರುವ ಅವರು,

“ನಾನು ನನ್ನ ಅನುಭವದ ಮೂಲಕ ಮಾತನಾಡುತ್ತೇನೆ. ಇದನ್ನೇ ಅಂದು ಹೇಳಿದ್ದೆ. ನನ್ನ ಪತಿ ಝೊರಾಷ್ಟ್ರಿಯನ್​ (ಪಾರ್ಸಿ). ಅವರ ನೀತಿ ನಿಯಮಗಳ ಪ್ರಕಾರ ಅವರ ದೇಗುಲಕ್ಕೆ (ಅಗ್ನಿ ದೇಗುಲ) ನನಗೆ ಪ್ರವೇಶವಿಲ್ಲ. ಆ ನೀತಿ ನಿಯಮಗಳು ಸಂವಿಧಾನದ ಮೂಲಕ ಸ್ಥಾಪಿತವಾಗಿದ್ದಲ್ಲ. ಧಾರ್ಮಿಕ ಆಚರಣೆಗಳ ಮೂಲಕ ರಚನೆಯಾಗಿದ್ದು. ನಾನು ಇಷ್ಟು ದೊಡ್ಡ ಹುದ್ದೆಯಲ್ಲಿದ್ದರೂ ನನಗೆ ಅಗ್ನಿ ದೇಗುಲಕ್ಕೆ ಪ್ರವೇಶ ನೀಡಲಿಲ್ಲ. ಆದರೆ, ನಾನು ಇದರ ವಿರುದ್ಧ ನ್ಯಾಯಾಲಯದ ಮೆಟ್ಟಿಲು ಏರಲಿಲ್ಲ. ಅವರ ನಂಬಿಕೆಗಳನ್ನು ನಾನು ಗೌರವಿಸಿದೆ,” ಎಂದು ಅವರು ಹೇಳಿಕೊಂಡಿದ್ದಾರೆ.

“ಯಾವುದೇ ಧರ್ಮದ ಆಚರಣೆಗಳನ್ನು ನಾವು ಗೌರವಿಸಬೇಕು. ಅದನ್ನು ಉಲ್ಲಂಘಿಸುವವರು ಪತ್ರಿಕೆಗಳಲ್ಲಿ ಹೆಡ್​ಲೈನ್​ಗಳಾಗಲಷ್ಟೇ ಪ್ರಯತ್ನ ಮಾಡುತ್ತಿರುತ್ತಾರೆ. ಅಂಥ ಪ್ರಯತ್ನಗಳು ದೇಶದ ವೈವಿಧ್ಯತೆಗೆ ಮಾಡಿದ ಭಂಗ,” ಎಂದು ಸ್ಮೃತಿ ಅಭಿಪ್ರಾಯಪಟ್ಟಿದ್ದಾರೆ.

Vishwa News 24

Recent Posts

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

1 day ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

2 days ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

2 days ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 days ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

2 days ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

2 days ago