ನವದೆಹಲಿ: ಶಬರಿಮಲೆಯಲ್ಲಿ 50 ವರ್ಷದ ಒಳಗಿನ ಮಹಿಳೆಯರಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಿರುವ ಸುಪ್ರೀಂ ಕೋರ್ಟ್ನ ತೀರ್ಪಿನಿಂದಾಗಿ ಕೇರಳದಲ್ಲಿ ಉಂಟಾಗಿರುವ ಘರ್ಷಣೆಯ ಕುರಿತು ಸ್ಮೃತಿ ಇರಾನಿ ಅವರು ತಡವಾಗಿ ಮಾತನಾಡಿದ್ದಾರೆ. ಈ ವೇಳೆ ಅವರು ತಮ್ಮದೇ ಅನುಭವವೊಂದನ್ನು ಉದಾಹರಣೆಯಾಗಿ ನೀಡಿದ್ದಾರೆ.
ಶುಕ್ರವಾರ ದೆಹಲಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಸ್ಮೃತಿ ಇರಾನಿ ಭಾಗವಹಿಸಿದ್ದರು. ಶಬರಿಮಲೆ ಪ್ರಕರಣದ ಕುರಿತು ಅವರು ಹಿಂದೊಮ್ಮೆ ನೀಡಿದ್ದ ” ಪ್ರಾರ್ಥಿಸುವ ಹಕ್ಕು ಎಂಬುದು ಅಪಹಾಸ್ಯ ಮಾಡುವ ಹಕ್ಕಲ್ಲ, ” ಎಂಬ ಹೇಳಿಕೆ ಕುರಿತು ವಿದ್ಯಾರ್ಥಿಗಳು ಪ್ರಶ್ನೆ ಮಾಡಿದರು. ಈ ವೇಳೆ ಮಾತನಾಡಿರುವ ಅವರು,
“ನಾನು ನನ್ನ ಅನುಭವದ ಮೂಲಕ ಮಾತನಾಡುತ್ತೇನೆ. ಇದನ್ನೇ ಅಂದು ಹೇಳಿದ್ದೆ. ನನ್ನ ಪತಿ ಝೊರಾಷ್ಟ್ರಿಯನ್ (ಪಾರ್ಸಿ). ಅವರ ನೀತಿ ನಿಯಮಗಳ ಪ್ರಕಾರ ಅವರ ದೇಗುಲಕ್ಕೆ (ಅಗ್ನಿ ದೇಗುಲ) ನನಗೆ ಪ್ರವೇಶವಿಲ್ಲ. ಆ ನೀತಿ ನಿಯಮಗಳು ಸಂವಿಧಾನದ ಮೂಲಕ ಸ್ಥಾಪಿತವಾಗಿದ್ದಲ್ಲ. ಧಾರ್ಮಿಕ ಆಚರಣೆಗಳ ಮೂಲಕ ರಚನೆಯಾಗಿದ್ದು. ನಾನು ಇಷ್ಟು ದೊಡ್ಡ ಹುದ್ದೆಯಲ್ಲಿದ್ದರೂ ನನಗೆ ಅಗ್ನಿ ದೇಗುಲಕ್ಕೆ ಪ್ರವೇಶ ನೀಡಲಿಲ್ಲ. ಆದರೆ, ನಾನು ಇದರ ವಿರುದ್ಧ ನ್ಯಾಯಾಲಯದ ಮೆಟ್ಟಿಲು ಏರಲಿಲ್ಲ. ಅವರ ನಂಬಿಕೆಗಳನ್ನು ನಾನು ಗೌರವಿಸಿದೆ,” ಎಂದು ಅವರು ಹೇಳಿಕೊಂಡಿದ್ದಾರೆ.
“ಯಾವುದೇ ಧರ್ಮದ ಆಚರಣೆಗಳನ್ನು ನಾವು ಗೌರವಿಸಬೇಕು. ಅದನ್ನು ಉಲ್ಲಂಘಿಸುವವರು ಪತ್ರಿಕೆಗಳಲ್ಲಿ ಹೆಡ್ಲೈನ್ಗಳಾಗಲಷ್ಟೇ ಪ್ರಯತ್ನ ಮಾಡುತ್ತಿರುತ್ತಾರೆ. ಅಂಥ ಪ್ರಯತ್ನಗಳು ದೇಶದ ವೈವಿಧ್ಯತೆಗೆ ಮಾಡಿದ ಭಂಗ,” ಎಂದು ಸ್ಮೃತಿ ಅಭಿಪ್ರಾಯಪಟ್ಟಿದ್ದಾರೆ.
ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…
ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…
ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…
ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…
ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…