ಕಲಬುರ್ಗಿ, : ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ದ ಚಿಂಚೋಳಿ ಕ್ಷೇತ್ರದ ಮಾಜಿ ಶಾಸಕ ಉಮೇಶ್ ಜಾಧವ್ ತನ್ನ ಮಗಳು ಪಿಯುಸಿಯಲ್ಲಿ ಅನುತೀರ್ಣ ಆಗಲು ಕಾಂಗ್ರೆಸ್ ನಾಯಕರು ಸುಖಾಸುಮ್ಮನೆ ಆರೋಪಿಸಿ ನೀಡಿದ ಮಾನಸಿಕ ಹಿಂಸೆಯೇ ಕಾರಣ ಎಂದು ಆರೋಪಿಸಿದ್ದಾರೆ.
ನನ್ನ ಪುತ್ರಿ ಪಿಯುಸಿ ಪರೀಕ್ಷೆ ಬರೆಯಲು ಹೋದಾಗ ಅಲ್ಲಿನ ಶಿಕ್ಷಕರೊಬ್ಬರು, ಇವರ ಅಪ್ಪ ಮಾರಾಟವಾಗಿದ್ದಾನೆ ಎಂದು ಹೇಳಿ ಮಾನಸಿಕ ಹಿಂಸೆ ನೀಡಿದ್ದಾರೆ. ಇದರಿಂದ ನೊಂದುಕೊಂಡ ಮಗಳು ಪರೀಕ್ಷೆ ಬರೆಯದೇ ಅಳುತ್ತಾಲೇ ಮನೆಗೆ ಹಿಂತಿರುಗಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೂ ಮುಂದಾಗಿದ್ದಳು. ಇದನ್ನು ಗಮನಿಸಿದ ನನ್ನ ಪತ್ನಿ ಆಕೆಯನ್ನು ಜೀವಂತ ಉಳಿಯುವಂತೆ ನೋಡಿಕೊಂಡಿದ್ದಾಳೆ ಎಂದಿದ್ದಾರೆ.
ಈ ಹಿಂದೆಯೇ ಪ್ರಿಯಾಂಕ್ ಖರ್ಗೆ ಅವರು ನನ್ನನು ಕಾಂಗ್ರೆಸ್ ಪಕ್ಷದಿಂದ ಹೊರಗಟ್ಟಬೇಕು ಎಂದು ತಂತ್ರ ಮಾಡಿಕೊಂಡಿದ್ದರು. ನನ್ನ ಮಗನ ವಿವಾಹದ ಸಂದರ್ಭ ಕೂಡಾ ಪ್ರಿಯಾಂಕ್ ಖರ್ಗೆಯ ಆಪ್ತರು ಮನೆಗೆ ಬಂದು ಗಲಾಟೆ ಎಬ್ಬಿಸಿದ್ದರು. ಇದನ್ನು ಕಂಡು ನಮ್ಮ ಮನೆಯಲ್ಲಿದ್ದ ಬೀಗರು, ಅತಿಥಿಗಳು ಅಂದೇ ಅವರ ಊರಿಗೆ ಹಿಂತಿರುಗಿದ್ದರು ಎಂದು ಆರೋಪಿಸಿದರು.
ನನ್ನ ಪುತ್ರಿ ಈ ಹಿಂದೆ ಪ್ರತಿ ಸಾರಿ ಉನ್ನತ ಶ್ರೇಣಿಯಲ್ಲಿ ಪರೀಕ್ಷೆಯಲ್ಲಿ ಪಾಸು ಆಗುತ್ತಿದ್ದಳು. ಆದರೆ, ಕಾಂಗ್ರೆಸ್ ನಾಯಕರು ನಮಗೆ ಸಾಕಷ್ಟು ಮಾನಸಿಕ ಹಿಂಸೆ ನೀಡಿದ್ದರು. ಇದರಿಂದ ನಮ್ಮ ಕುಟುಂಬ ಸಾಕಷ್ಟು ನೋವನ್ನು ಅನುಭವಿಸಿತ್ತು. ನಾನು ದುಡ್ಡಿಗಾಗಿ ಬಿಜೆಪಿಗೆ ಮಾರಾಟವಾಗಿದ್ದೇನೆ ಎಂದು ಕಾಂಗ್ರೆಸ್ ನಾಯಕರು ಮಾಡಿದ ಆರೋಪವೇ ಕಾರಣ ಎಂದಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…