Featured

ನನ್ನ ಮಗಳು ಪಿಯುಸಿಯಲ್ಲಿ ಅನುತೀರ್ಣ ವಾಗಲು ಕಾಂಗ್ರೆಸ್ ಕಾರಣ : ಉಮೇಶ್ ಜಾಧವ್ -Vishwanews24

ಕಲಬುರ್ಗಿ, : ಕಾಂಗ್ರೆಸ್​ ತೊರೆದು ಬಿಜೆಪಿಗೆ ಸೇರಿದ್ದ ಚಿಂಚೋಳಿ ಕ್ಷೇತ್ರದ ಮಾಜಿ ಶಾಸಕ ಉಮೇಶ್ ಜಾಧವ್ ತನ್ನ ಮಗಳು ಪಿಯುಸಿಯಲ್ಲಿ ಅನುತೀರ್ಣ ಆಗಲು ಕಾಂಗ್ರೆಸ್​ ನಾಯಕರು ಸುಖಾಸುಮ್ಮನೆ ಆರೋಪಿಸಿ ನೀಡಿದ ಮಾನಸಿಕ ಹಿಂಸೆಯೇ ಕಾರಣ ಎಂದು ಆರೋಪಿಸಿದ್ದಾರೆ.

ನನ್ನ ಪುತ್ರಿ ಪಿಯುಸಿ ಪರೀಕ್ಷೆ ಬರೆಯಲು ಹೋದಾಗ ಅಲ್ಲಿನ ಶಿಕ್ಷಕರೊಬ್ಬರು, ಇವರ ಅಪ್ಪ ಮಾರಾಟವಾಗಿದ್ದಾನೆ ಎಂದು ಹೇಳಿ ಮಾನಸಿಕ ಹಿಂಸೆ ನೀಡಿದ್ದಾರೆ. ಇದರಿಂದ ನೊಂದುಕೊಂಡ ಮಗಳು ಪರೀಕ್ಷೆ ಬರೆಯದೇ ಅಳುತ್ತಾಲೇ ಮನೆಗೆ ಹಿಂತಿರುಗಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೂ ಮುಂದಾಗಿದ್ದಳು. ಇದನ್ನು ಗಮನಿಸಿದ ನನ್ನ ಪತ್ನಿ ಆಕೆಯನ್ನು ಜೀವಂತ ಉಳಿಯುವಂತೆ ನೋಡಿಕೊಂಡಿದ್ದಾಳೆ ಎಂದಿದ್ದಾರೆ.

ಈ ಹಿಂದೆಯೇ ಪ್ರಿಯಾಂಕ್ ಖರ್ಗೆ ಅವರು ನನ್ನನು ಕಾಂಗ್ರೆಸ್ ಪಕ್ಷದಿಂದ ಹೊರಗಟ್ಟಬೇಕು ಎಂದು ತಂತ್ರ ಮಾಡಿಕೊಂಡಿದ್ದರು. ನನ್ನ ಮಗನ ವಿವಾಹದ ಸಂದರ್ಭ ಕೂಡಾ ಪ್ರಿಯಾಂಕ್ ಖರ್ಗೆಯ ಆಪ್ತರು ಮನೆಗೆ ಬಂದು ಗಲಾಟೆ ಎಬ್ಬಿಸಿದ್ದರು. ಇದನ್ನು ಕಂಡು ನಮ್ಮ ಮನೆಯಲ್ಲಿದ್ದ ಬೀಗರು, ಅತಿಥಿಗಳು ಅಂದೇ ಅವರ ಊರಿಗೆ ಹಿಂತಿರುಗಿದ್ದರು ಎಂದು ಆರೋಪಿಸಿದರು.

ನನ್ನ ಪುತ್ರಿ ಈ ಹಿಂದೆ ಪ್ರತಿ ಸಾರಿ ಉನ್ನತ ಶ್ರೇಣಿಯಲ್ಲಿ ಪರೀಕ್ಷೆಯಲ್ಲಿ ಪಾಸು ಆಗುತ್ತಿದ್ದಳು. ಆದರೆ, ಕಾಂಗ್ರೆಸ್​ ನಾಯಕರು ನಮಗೆ ಸಾಕಷ್ಟು ಮಾನಸಿಕ ಹಿಂಸೆ ನೀಡಿದ್ದರು. ಇದರಿಂದ ನಮ್ಮ ಕುಟುಂಬ ಸಾಕಷ್ಟು ನೋವನ್ನು ಅನುಭವಿಸಿತ್ತು. ನಾನು ದುಡ್ಡಿಗಾಗಿ ಬಿಜೆಪಿಗೆ ಮಾರಾಟವಾಗಿದ್ದೇನೆ ಎಂದು ಕಾಂಗ್ರೆಸ್​ ನಾಯಕರು ಮಾಡಿದ ಆರೋಪವೇ ಕಾರಣ ಎಂದಿದ್ದಾರೆ.

 

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

1 day ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

1 day ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

1 day ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

1 day ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

1 day ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

1 day ago