ಚಿಕ್ಕಮಗಳೂರು: ನನ್ನ ಮಗಳು ಮಾಡಿದ್ದು ತಪ್ಪು. ಪೊಲೀಸರು ಅವಳ ಕೈ-ಕಾಲು ಮುರಿಯಲಿ ಎಂದು ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಾ ತಂದೆ ವಾಜೀದ್ ಹೇಳಿದ್ದಾರೆ.
ಪುತ್ರಿಯ ದೇಶದ್ರೋಹಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ವಾಜೀದ್ ಅವರು, ನನ್ನ ಮಗಳು ಮಾಡಿದ್ದನ್ನು ಕಂಡಿತ ಒಪ್ಪಿಕೊಳ್ಳುವುದಿಲ್ಲ. ಆಕೆ ಬೇಲ್ ಮೇಲೆ ಹೊರಗೆ ಬರುವುದು ಬೇಡ. 6 ತಿಂಗಳು ಜೈಲಿನಲ್ಲೇ ಇರಲಿ. ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಅಕ್ಷರಶಃ ತಪ್ಪು. ಮಗಳ ನಡೆಯನ್ನು ಎಂದಿಗೂ ಸಹಿಸುವುದಿಲ್ಲ ಎಂದು ತಿಳಿಸಿದರು.
ನಾನು ಎಷ್ಟೇ ಬುದ್ಧಿವಾದ ಹೇಳಿದರೂ ಮಗಳು ಕೇಳುತ್ತಿರಲಿಲ್ಲ. ಕೆಲ ಮುಸ್ಲಿಮರ ಜೊತೆ ಸೇರಿ ಪ್ರಚೋದನಕಾರಿ ಮಾತುಗಳನ್ನು ಆಡುತ್ತಿದ್ದಳು. ಪೊಲೀಸರು ಆಕೆಯನ್ನು ಹೊರಗೆ ಬಿಡುವುದು ಬೇಡ. ನಾನು ಆಕೆಗೆ ಬೇಲ್ ಕೊಡಿಸುವುದಿಲ್ಲ, ಜೈಲಿನಲ್ಲೇ ಇರಲಿ. ಮಗಳ ಪರ ವಾದ ಮಾಡಲು ವಕೀಲರನ್ನು ನೇಮಕ ಮಾಡುವುದಿಲ್ಲ. ಸದ್ಯಕ್ಕೆ ಅವಳನ್ನು ಮನೆಗೂ ಸೇರಿಸುವುದಿಲ್ಲ. ಕಳೆದ ಐದು ದಿನದಿಂದ ಮಗಳು ನನ್ನ ಜೊತೆ ಯಾವುದೇ ಸಂಪರ್ಕದಲ್ಲಿ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…