ನವದೆಹಲಿ : ಪಶುವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಎನ್ಕೌಂಟರ್ ಕುರಿತು ಪ್ರತಿಕ್ರಿಯೆ ನೀಡಿರುವ ನಿರ್ಭಯಾರ ತಾಯಿ ಆಶಾ ದೇವಿ ಸಂತಸ ವ್ಯಕ್ತಪಡಿಸಿದ್ದು, ಪೊಲೀಸರ ಕಾರ್ಯಕ್ಕೆ ಧನ್ಯವಾದ ತಿಳಿಸಿದ್ದಾರೆ.
“ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲೆ ಅತ್ಯಾಚಾರ ಹಾಗೂ ಹತ್ಯೆ ಮಾಡಿದ ಆರೋಪಿಗಳನ್ನು ಎನ್ಕೌಂಟರ್ ಮಾಡಿದ ವಿಷಯ ಕೇಳಿ ಸಂತೋಷವಾಗಿದೆ. ನನ್ನ ಮಗಳನ್ನು ಅತ್ಯಾಚಾರ ಮಾಡಿದ ಆರೋಪಿಗಳಿಗೆ ಶೀಘ್ರದಲ್ಲೇ ಗಲ್ಲು ಶಿಕ್ಷೆ ವಿಧಿಸಿ” ಎಂದು ನಿರ್ಭಯಾ ತಾಯಿ ಆಶಾ ದೇವಿ ಆಗ್ರಹಿಸಿದ್ದಾರೆ.
ನಿರ್ಭಯಾ ತಾಯಿ ಆಶಾ ದೇವಿ, “ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಕಾಮುಕರಿಗೆ ಸಿಕ್ಕಿರುವ ಶಿಕ್ಷೆಯಿಂದ ನನಗೆ ಬಹಳ ಸಂತೋಷವಾಗಿದೆ. ಪೊಲೀಸರು ಉತ್ತಮ ಕಾರ್ಯವನ್ನು ನಿರ್ವಹಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿ ಪೊಲೀಸ್ ಸಿಬ್ಬಂದಗಳ ವಿರುದ್ಧ ಯಾವುದೇ ರೀತಿಯ ಕ್ರಮಕೈಗೊಳ್ಳಬಾರದು” ಎಂದು ಮನವಿ ಮಾಡಿದರು.
“ನನ್ನ ಮಗಳ ಮೇಲೆ ನಡೆದ ಅತ್ಯಾಚಾರ ವಿಷಯಕ್ಕೆ ಸಂಬಂಧಿಸಿ ಕಳೆದ 7 ವರ್ಷಗಳಿಂದ ಕಚೇರಿಯಿಂದ ಕಚೇರಿಗೆ ಅಲೆದಾಡುತ್ತಿದ್ದೇನೆ. ನನ್ನ ಮಗಳ ಅತ್ಯಾಚಾರ ಮಾಡಿದ ಆರೋಪಿಗಳಿಗೂ ಶೀಘ್ರದಲ್ಲೆ ಗಲ್ಲು ಶಿಕ್ಷೆ ನೀಡುವಂತೆ ಈ ಮೂಲಕ ದೇಶದ ನ್ಯಾಯಾಂಗ ವ್ಯವಸ್ಥೆಗೆ ಮನವಿ ಮಾಡಿಕೊಳ್ಳುತ್ತೇನೆ” ಎಂದು ಹೇಳಿದ್ದಾರೆ.
ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಹಾಗೂ ಹತ್ಯೆ ಮಾಡಿದ ಆರೋಪಿಗಳನ್ನು ಇಂದು ಬೆಳಿಗ್ಗೆ ಮಹಜರಿಗಾಗಿ ಕರೆದೊಯ್ಯುದಿದ್ದು ಪರಾರಿಯಾಗಲು ಯತ್ನಿಸಿದಾಗ ಎನ್ಕೌಂಟರ್ ಮಾಡಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಪೋಸ್ಟ್: ಕಾಪು ಮೂಲದ ಯುವಕ ಅರೆಸ್ಟ್ ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆಯ ಸಂದೇಶಗಳನ್ನು ಹಂಚಿಕೊ0ಡ…
ಬಾಂಗ್ಲಾದಲ್ಲಿ ನದಿಗೆ ಉರುಳಿದ ಬಸ್ : 23 ಜನ ಸಾವು, ಹಲವರು ನಾಪತ್ತೆ ಢಾಕಾ: ಸುಮಾರು 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ…
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : ಓರ್ವ ಆರೋಪಿಗೆ ಜಾಮೀನು ಸುಳ್ಯ: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ…
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…