ನವದೆಹಲಿ : ಪಶುವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಎನ್ಕೌಂಟರ್ ಕುರಿತು ಪ್ರತಿಕ್ರಿಯೆ ನೀಡಿರುವ ನಿರ್ಭಯಾರ ತಾಯಿ ಆಶಾ ದೇವಿ ಸಂತಸ ವ್ಯಕ್ತಪಡಿಸಿದ್ದು, ಪೊಲೀಸರ ಕಾರ್ಯಕ್ಕೆ ಧನ್ಯವಾದ ತಿಳಿಸಿದ್ದಾರೆ.
“ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲೆ ಅತ್ಯಾಚಾರ ಹಾಗೂ ಹತ್ಯೆ ಮಾಡಿದ ಆರೋಪಿಗಳನ್ನು ಎನ್ಕೌಂಟರ್ ಮಾಡಿದ ವಿಷಯ ಕೇಳಿ ಸಂತೋಷವಾಗಿದೆ. ನನ್ನ ಮಗಳನ್ನು ಅತ್ಯಾಚಾರ ಮಾಡಿದ ಆರೋಪಿಗಳಿಗೆ ಶೀಘ್ರದಲ್ಲೇ ಗಲ್ಲು ಶಿಕ್ಷೆ ವಿಧಿಸಿ” ಎಂದು ನಿರ್ಭಯಾ ತಾಯಿ ಆಶಾ ದೇವಿ ಆಗ್ರಹಿಸಿದ್ದಾರೆ.
ನಿರ್ಭಯಾ ತಾಯಿ ಆಶಾ ದೇವಿ, “ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಕಾಮುಕರಿಗೆ ಸಿಕ್ಕಿರುವ ಶಿಕ್ಷೆಯಿಂದ ನನಗೆ ಬಹಳ ಸಂತೋಷವಾಗಿದೆ. ಪೊಲೀಸರು ಉತ್ತಮ ಕಾರ್ಯವನ್ನು ನಿರ್ವಹಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿ ಪೊಲೀಸ್ ಸಿಬ್ಬಂದಗಳ ವಿರುದ್ಧ ಯಾವುದೇ ರೀತಿಯ ಕ್ರಮಕೈಗೊಳ್ಳಬಾರದು” ಎಂದು ಮನವಿ ಮಾಡಿದರು.
“ನನ್ನ ಮಗಳ ಮೇಲೆ ನಡೆದ ಅತ್ಯಾಚಾರ ವಿಷಯಕ್ಕೆ ಸಂಬಂಧಿಸಿ ಕಳೆದ 7 ವರ್ಷಗಳಿಂದ ಕಚೇರಿಯಿಂದ ಕಚೇರಿಗೆ ಅಲೆದಾಡುತ್ತಿದ್ದೇನೆ. ನನ್ನ ಮಗಳ ಅತ್ಯಾಚಾರ ಮಾಡಿದ ಆರೋಪಿಗಳಿಗೂ ಶೀಘ್ರದಲ್ಲೆ ಗಲ್ಲು ಶಿಕ್ಷೆ ನೀಡುವಂತೆ ಈ ಮೂಲಕ ದೇಶದ ನ್ಯಾಯಾಂಗ ವ್ಯವಸ್ಥೆಗೆ ಮನವಿ ಮಾಡಿಕೊಳ್ಳುತ್ತೇನೆ” ಎಂದು ಹೇಳಿದ್ದಾರೆ.
ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಹಾಗೂ ಹತ್ಯೆ ಮಾಡಿದ ಆರೋಪಿಗಳನ್ನು ಇಂದು ಬೆಳಿಗ್ಗೆ ಮಹಜರಿಗಾಗಿ ಕರೆದೊಯ್ಯುದಿದ್ದು ಪರಾರಿಯಾಗಲು ಯತ್ನಿಸಿದಾಗ ಎನ್ಕೌಂಟರ್ ಮಾಡಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…