Featured

ನನ್ನ ಮಗ ಕೊಲೆ ಸುಲಿಗೆ ದರೋಡೆ ಮಾಡಿಲ್ಲ. ವ್ಯಾಪಾರ ವ್ಯವಹಾರ ನಡೆಸಿದ್ದಾರೆ ಅಷ್ಟೆ : ಡಿ.ಕೆ ಶಿ ತಾಯಿ ಗೌರಮ್ಮ -Vishwanews24

ರಾಮನಗರ:  ಬಿಜೆಪಿ ಅಥವಾ ಬೇರೆ ಯಾರೇ ಆಗಲಿ ನನ್ನ ಮಗನನ್ನು ಏನೂ ಮಾಡಲು ಸಾಧ್ಯವಿಲ್ಲ, ನನ್ನ ಮಗ ಯಾವುದೇ ತಪ್ಪು ಮಾಡಿಲ್ಲ ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ತಾಯಿ ಗೌರಮ್ಮ ಹೇಳಿದ್ದಾರೆ.

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿಯಲ್ಲಿ ಮಾತನಾಡಿದ ಗೌರಮ್ಮ, ಗಣೇಶ ಹಬ್ಬದ ದಿನದಂದು ತಮ್ಮ ಪೂರ್ವಿಕರಿಗೆ ಎಡೆಯಿಟ್ಟು, ಅವರ ಸಮಾಧಿಗೆ ಪೂಜೆ ಸಲ್ಲಿಸಲು ಮಾಜಿ ಸಚಿವ ಡಿ. ಕೆ ಶಿವಕುಮಾರ್‌ ಅವರಿಗೆ ಜಾರಿ ನಿರ್ದೇಶನಾಲಯ ಅವಕಾಶ ನೀಡದ ಹಿನ್ನೆಲೆ ಮನೆಗೆ ಬಾರದ ಡಿಕೆಶಿ ನೆನೆದು ತಾಯಿ ಗೌರಮ್ಮ ಕಣ್ಣೀರಿಟ್ಟಿದ್ದಾರೆ.

ಪ್ರತಿ ವರ್ಷ ಇಬ್ಬರು ಮಕ್ಕಳು ಮನೆಗೆ ಬರುತ್ತಿದ್ದರು. ಯಾವುದೇ ಕೆಲಸಗಳಿದ್ದರು ತಪ್ಪಿಸದೆ ಪೂರ್ವಿಕರ ಸಮಾಧಿಗಳಿಗೆ ಎಡೆ ಇಟ್ಟು ಪೂಜೆ ಸಲ್ಲಿಸುತ್ತಿದ್ದರು ಎಂದು ಗೌರಮ್ಮ ತಿಳಿಸಿದ್ದಾರೆ.

ಇಡಿ‌ ಸಮನ್ಸ್ ಜಾರಿಯಿಂದ ಈ ಬಾರಿ ಹಬ್ಬಕ್ಕೆ ಇಬ್ಬರು ಮಕ್ಕಳು ಬಂದಿಲ್ಲ. ನನ್ನ ಮಗ ಕೊಲೆ ಸುಲಿಗೆ ದರೋಡೆ ಮಾಡಿಲ್ಲ. ವ್ಯಾಪಾರ ವ್ಯವಹಾರ ನಡೆಸಿದ್ದಾರೆ ಅಷ್ಟೆ. ಅದು ಮಾಡುವುದು ತಪ್ಪೇ?  ನಾವು ರಾತ್ರೋ ರಾತ್ರಿ ಶ್ರೀಮಂತರಾಗಿಲ್ಲ,  ನನ್ನ ಮಾವ  ಕೆಂಪೇಗೌಡ ಊರಿನಲ್ಲಿ  ದೊಡ್ಡ ಹೆಸರು ಮಾಡಿದ್ದವರು, ಬಿಜೆಪಿಯವರು ನನ್ನ ಮಗನ ರಾಜಕೀಯ ಬೆಳವಣಿಗೆ ಸಹಿಸದೇ ಹೊಟ್ಟೆಕಿಚ್ಚಿನಿಂದ ಈ ರೀತಿ ಮಾಡುತ್ತಿದ್ದಾರೆ ಎಂದು ಮಕ್ಕಳನ್ನ ನೆನಪಿಸಿಕೊಂಡು ತಾಯಿ ಗೌರಮ್ಮ ಕಣ್ಣೀರಿಟ್ಟಿದ್ದಾರೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago