Featured

ನನ್ನ ಮಗ ಕೊಲೆ ಸುಲಿಗೆ ದರೋಡೆ ಮಾಡಿಲ್ಲ. ವ್ಯಾಪಾರ ವ್ಯವಹಾರ ನಡೆಸಿದ್ದಾರೆ ಅಷ್ಟೆ : ಡಿ.ಕೆ ಶಿ ತಾಯಿ ಗೌರಮ್ಮ -Vishwanews24

ರಾಮನಗರ:  ಬಿಜೆಪಿ ಅಥವಾ ಬೇರೆ ಯಾರೇ ಆಗಲಿ ನನ್ನ ಮಗನನ್ನು ಏನೂ ಮಾಡಲು ಸಾಧ್ಯವಿಲ್ಲ, ನನ್ನ ಮಗ ಯಾವುದೇ ತಪ್ಪು ಮಾಡಿಲ್ಲ ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ತಾಯಿ ಗೌರಮ್ಮ ಹೇಳಿದ್ದಾರೆ.

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿಯಲ್ಲಿ ಮಾತನಾಡಿದ ಗೌರಮ್ಮ, ಗಣೇಶ ಹಬ್ಬದ ದಿನದಂದು ತಮ್ಮ ಪೂರ್ವಿಕರಿಗೆ ಎಡೆಯಿಟ್ಟು, ಅವರ ಸಮಾಧಿಗೆ ಪೂಜೆ ಸಲ್ಲಿಸಲು ಮಾಜಿ ಸಚಿವ ಡಿ. ಕೆ ಶಿವಕುಮಾರ್‌ ಅವರಿಗೆ ಜಾರಿ ನಿರ್ದೇಶನಾಲಯ ಅವಕಾಶ ನೀಡದ ಹಿನ್ನೆಲೆ ಮನೆಗೆ ಬಾರದ ಡಿಕೆಶಿ ನೆನೆದು ತಾಯಿ ಗೌರಮ್ಮ ಕಣ್ಣೀರಿಟ್ಟಿದ್ದಾರೆ.

ಪ್ರತಿ ವರ್ಷ ಇಬ್ಬರು ಮಕ್ಕಳು ಮನೆಗೆ ಬರುತ್ತಿದ್ದರು. ಯಾವುದೇ ಕೆಲಸಗಳಿದ್ದರು ತಪ್ಪಿಸದೆ ಪೂರ್ವಿಕರ ಸಮಾಧಿಗಳಿಗೆ ಎಡೆ ಇಟ್ಟು ಪೂಜೆ ಸಲ್ಲಿಸುತ್ತಿದ್ದರು ಎಂದು ಗೌರಮ್ಮ ತಿಳಿಸಿದ್ದಾರೆ.

ಇಡಿ‌ ಸಮನ್ಸ್ ಜಾರಿಯಿಂದ ಈ ಬಾರಿ ಹಬ್ಬಕ್ಕೆ ಇಬ್ಬರು ಮಕ್ಕಳು ಬಂದಿಲ್ಲ. ನನ್ನ ಮಗ ಕೊಲೆ ಸುಲಿಗೆ ದರೋಡೆ ಮಾಡಿಲ್ಲ. ವ್ಯಾಪಾರ ವ್ಯವಹಾರ ನಡೆಸಿದ್ದಾರೆ ಅಷ್ಟೆ. ಅದು ಮಾಡುವುದು ತಪ್ಪೇ?  ನಾವು ರಾತ್ರೋ ರಾತ್ರಿ ಶ್ರೀಮಂತರಾಗಿಲ್ಲ,  ನನ್ನ ಮಾವ  ಕೆಂಪೇಗೌಡ ಊರಿನಲ್ಲಿ  ದೊಡ್ಡ ಹೆಸರು ಮಾಡಿದ್ದವರು, ಬಿಜೆಪಿಯವರು ನನ್ನ ಮಗನ ರಾಜಕೀಯ ಬೆಳವಣಿಗೆ ಸಹಿಸದೇ ಹೊಟ್ಟೆಕಿಚ್ಚಿನಿಂದ ಈ ರೀತಿ ಮಾಡುತ್ತಿದ್ದಾರೆ ಎಂದು ಮಕ್ಕಳನ್ನ ನೆನಪಿಸಿಕೊಂಡು ತಾಯಿ ಗೌರಮ್ಮ ಕಣ್ಣೀರಿಟ್ಟಿದ್ದಾರೆ.

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

5 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

6 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago